ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ವಿದ್ಯಾರ್ಥಿಗಳ ಜೀವನವನ್ನು ರೂಪಿಸುವ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಶಿಡ್ಲಘಟ್ಟ ನಗರವೂ ಸೇರಿದಂತೆ ತಾಲೂಕಿನಲ್ಲಿ ಆರಂಭವಾಗಿದೆ.
ಶಿಡ್ಲಘಟ್ಟ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಮಳ್ಳೂರಿನ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು ಪರೀಕ್ಷಾರ್ಥಿಗಳು ಉತ್ಸಾಹದಿಂದ ಪರೀಕ್ಷೆಗಳನ್ನು ಬರೆದಿದ್ದಾರೆ.
ಪರೀಕ್ಷೆಯ ಅಂಗವಾಗಿ ನಗರದ ಸರ್ಕಾರಿ ಪ್ರೌಢಶಾಲಾ ಸುತ್ತಮುತ್ತಲು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿತ್ತು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲುಗಳಿಗೆ ಅವಕಾಶ ಇಲ್ಲದಂತೆ ಸಿಟ್ಟಿಂಗ್ ಸ್ಕ್ವಾಡ್ ಸಹ ವ್ಯವಸ್ಥೆ ಮಾಡಲಾಗಿತ್ತು.
ಇಂದಿನಿಂದ ಮಾರ್ಚ್ 22 ಎರಡುವರೆಗೆ ಪರೀಕ್ಷೆ ನಡೆಯಲಿದ್ದು ಪ್ರಥಮ ದಿನದಂದು ಕನ್ನಡ ಭಾಷೆ ಪರೀಕ್ಷೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ 1089 ಪರೀಕ್ಷಾರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡು 1061 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು 28 ವಿದ್ಯಾರ್ಥಿಗಳು ಗೈರು ಹಾಜರು ಆಗಿದ್ದರು ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥ ವೆಂಕಟಶಿವಾರೆಡ್ಡಿ ತಿಳಿಸಿದರು.
ಅದೇ ರೀತಿ ತಾಲೂಕಿನ ಮಳ್ಳೂರಿನ ಸ್ವಾಮಿ ವಿವೇಕಾನಂದ ಪರೀಕ್ಷಾ ಕೇಂದ್ರದಲ್ಲಿ 671 ಪರೀಕ್ಷಾರ್ಥಿಗಳು ಹೆಸರುಗಳನ್ನು ನೋಂದಾಯಿಸಿಕೊಂಡು 660 ಪರೀಕ್ಷಾರ್ಥಿಗಳು ಪರೀಕ್ಷೆ ನೀಡಿದರು ಇನ್ನುಳಿದಂತೆ 11 ಪರೀಕ್ಷಾರ್ಥಿಗಳು ಗೈರು ಹಾಜರಾಗಿದ್ದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಅಕ್ರಮ ಪ್ರವೇಶವನ್ನು ನಿಯಂತ್ರಿಸಲು ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.