ಬಂಟ್ವಾಳ (www.vknews. in): ಬಂಟ್ವಾಳ ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿಯ ವತಿಯಿಂದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆದ 13 ನೇ ವರ್ಷದ ಮೂಡೂರು – ಪಡೂರು ಬಂಟ್ವಾಳ ಕಂಬಳ ಶನಿವಾರ ಉದ್ಘಾಟನೆಗೊಂಡಿತು.
ಕಂಬಳವನ್ನು ಉದ್ಘಾಟಿಸಿದ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ ಈ ಭಾಗದ ರೈತಾಪಿ ವರ್ಗದ ಸಹಕಾರದಿಂದ ಹೊಸ ಆವಿಷ್ಕಾರದ ಕಾವಳಕಟ್ಟೆ ಕಂಬಳ ವೈಭವವನ್ನು ನಾವೂರು ಕಂಬಳದ ಮೂಲಕ ಮತ್ತೆ ಕಾಣುವಂತಾಗಲು ಸಾಧ್ಯವಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಭಹಾರೈಸಿದರು. ಅಲ್ಲಿಪಾದೆ ಸಂತ ಅಂತೋನಿ ಚರ್ಚ್ನ ಧರ್ಮಗುರು ರೆ| ಫಾ| ಫೆಡ್ರಿಕ್ ಮೊಂತೆರೊ ಅವರು ದೀಪ ಬೆಳಗಿಸಿದರು. ಮಾಜಿ ಮೇಯರ್ ಎಂ.ಶಶಿಧರ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ನಮ್ಮ ಕುಡ್ಲ ಮುಖ್ಯಸ್ಥ ಲೀಲಾಕ್ಷ ಕರ್ಕೇರ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ನ್ಯಾಯವಾದಿ ಅಶ್ವಿನಿ ಕುಮಾರ್ ರೈ, ಕಂಬಳ ಕೋಣಗಳ ಯಜಮಾನರಾದ ಉಮೇಶ್ ಶೆಟ್ಟಿ ಸಾಗು, ಲಿಯೋ ಫೆರ್ನಾಂಡೀಸ್ ಸರಪಾಡಿ,
ಉದ್ಯಮಿಗಳಾದ ರಘುನಾಥ ಸೋಮಯಾಜಿ, ಪುರುಷೋತ್ತಮ ಶೆಟ್ಟಿ, ಐತಪ್ಪ ಆಳ್ವ, ಎಂಆರ್ಜಿ ಗ್ರೂಪ್ ನ ಬಾಲಕೃಷ್ಣ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ಪ್ರವೀಣ್ ಆಳ್ವ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ನಾರಾಯಣ ನಾಯ್ಕ್, ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿಸೋಜ ಪುತ್ತೂರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ರೈ, ಕಂಬಳ ಸಮಿತಿಯ ಸಂಚಾಲಕ ಬಿ.ಪದ್ಮಶೇಖರ್ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಉಪಾಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಬೇಬಿ ಕುಂದರ್, ಸುದೀಪ್ಕುಮಾರ್ ಶೆಟ್ಟಿ, ಎಂ.ಎಸ್.ಮಹಮ್ಮದ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.