ರಾಯಚೂರು (www.vknews.in) ; ರಾಯಚೂರು ಹೊರವಲಯದ ಯರಮರಸ್ ಬಳಿ ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಶಬ್ಬಿರ್ ಅಹಮ್ಮದ್ (35), ಪತ್ನಿ ಜೆಲೆಖತ್ ಬೇಗಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಬಾಲಕಿ ಕೈ ಕಟ್ಟಾಗಿ ಆಸ್ಪತ್ರೆಯಲ್ಲಿದ್ದಾರೆ..
ಮೈಮುನ್ ಬೇಗಂ ಎಂಬ ಬಾಲಕಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಯಾವುದೇ ಚಿಕಿತ್ಸೆಗೆ ಬಾಲಕಿ ಸ್ಪಂದಿಸುತ್ತಿಲ್ಲ ಎನ್ನಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.