ನವದೆಹಲಿ (www.vknews.in) ; ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ರಾಜಸ್ಥಾನದ ಜೈಸಲ್ಮೇರ್ನಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೂ ಮುನ್ನ ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳೂ ಪಾರಾಗಿದ್ದಾರೆ.
ಜೈಸಲ್ಮೇರ್ನ ಜವಾಹರ್ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಿದ್ದ ಭಾರತ್ ಶಕ್ತಿ ಕಾರ್ಯಕ್ರಮದ ಸ್ಥಳದಿಂದ 100 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ಕಾಲೇಜು ಹಾಸ್ಟೆಲ್ ಎದುರು ವಿಮಾನ ಪತನಗೊಂಡಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ, ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ವಿಮಾನದಲ್ಲಿದ್ದ ಬೆಂಕಿಯನ್ನು ನೀರಿನಿಂದ ನಂದಿಸಲಾಯಿತು. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂಬುದು ಪ್ರಾಥಮಿಕ ಮಾಹಿತಿ.
ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ವಾಯುಪಡೆಯ ವಕ್ತಾರರು ತಿಳಿಸಿದ್ದಾರೆ. ಪೈಲಟ್ಗಳಿಗೆ ತರಬೇತಿ ನೀಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಒಂದು ವಾರದ ಹಿಂದೆ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಯುದ್ಧ ವಿಮಾನ ಪತನವಾಗಿತ್ತು.
ತೇಜಸ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಹಗುರವಾದ ಕಾಂಪ್ಯಾಕ್ಟ್ ವಿಮಾನವಾಗಿದೆ. ತೇಜಸ್ ವಿಮಾನ ಪತನಗೊಳ್ಳುತ್ತಿರುವುದು ಇದೇ ಮೊದಲು.
One Tejas aircraft of the Indian Air Force met with an accident at Jaisalmer, today during an operational training sortie. The pilot ejected safely. A Court of Inquiry has been constituted to find out the cause of the accident. — Indian Air Force (@IAF_MCC) March 12, 2024
One Tejas aircraft of the Indian Air Force met with an accident at Jaisalmer, today during an operational training sortie. The pilot ejected safely. A Court of Inquiry has been constituted to find out the cause of the accident.
— Indian Air Force (@IAF_MCC) March 12, 2024
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.