(www.vknews. in) ; ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ದಿನಾಂಕ: 04-04-2024ನೇ ಗುರು ವಾರದಂದು ಜರುಗಿತು. ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮುಂಬರುವ ಲೋಕ ಸಭಾ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವ ಬಗ್ಗೆ ಚರ್ಚಿಸಲಾಯಿತು.
ಗೃಹರಕ್ಷಕರ ಕ್ಷೇಮಾಭಿವೃದ್ದಿ ನಿಧಿಗೆ ವಂತಿಗೆಯನ್ನು ಕಟ್ಟಲು ಬಾಕಿ ಇರುವ ಗೃಹರಕ್ಷಕರ ಬಗ್ಗೆ ಚರ್ಚಿಸಲಾಯಿತು. ಮೂರು ವರ್ಷಗಳನ್ನು ಮೀರಿದ ಗೃಹರಕ್ಷಕರು ನವೀಕರಣ ಮಾಡಿಸಲು ಸೂಚಿಸಲಾಯಿತು. ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆ ನಡೆಸಲು ಎಲ್ಲಾ ಪೂರಕ ಸಿದ್ಧತೆ ಮಾಡಿಕೊಳ್ಳಲು ಫಟಕಾಧಿಕಾರಿಗಳಿಗೆ ಆದೇಶ ನೀಡಲಾಯಿತು. ಕಛೇರಿಯ ಅಧೀಕ್ಷಕ ಶ್ರೀ ಗೋಪಿನಾಥ್ ಮತ್ತು ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 15 ಘಟಕಗಳ ಘಟಕಾಧಿಕಾರಿಗಳಾದ ಮಾರ್ಕ್ಶೇರ್, ಸೀನಿಯರ್ ಪ್ಲಟೂನ್ ಕಮಾಂಡರ್, ಮಂಗಳೂರು ಘಟಕ, ಐತಪ್ಪ, ಘಟಕಾಧಿಕಾರಿ, ಬಂಟ್ವಾಳ ಘಟಕ, ತೀರ್ಥೇಶ್ ಘಟಕಾಧಿಕಾರಿ ಕಡಬ ಘಟಕ, ಪ್ರಭಾರ ಘಟಕಾಧಿಕಾರಿಗಳಾದ ಶ್ರೀ ಸುನಿಲ್, ಉಳ್ಳಾಲ ಘಟಕ, ಶಿವಪ್ಪ ನಾಯ್ಕ್, ಪಣಂಬೂರು ಘಟಕ, ಲೋಕೇಶ್, ಮೂಲ್ಕಿ ಘಟಕ, ದಿನೇಶ್ ಉಪ್ಪಿನಂಗಡಿ ಘಟಕ, ಗಿರಿಧರ್, ಸೋಮನಾಥ ಸುಳ್ಯ ಘಟಕ, ಹರಿಶ್ಚಂದ್ರ ಸುಬ್ರಹ್ಮಣ್ಯ ಘಟಕ, ಪಾಂಡಿರಾಜ್ ಮೂಡಬಿದ್ರೆ ಘಟಕ, ಜಯಾನಂದ , ಬೆಳ್ತಂಗಡಿ ಘಟಕ, ಗೃಹರಕ್ಷಕರಾದ ಜೀವನ್ ರಾಜ್,ಕನಕಪ್ಪ ಮಂಗಳೂರು ಘಟಕ ಇವರುಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.