(www.vknews. in) ; ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು ಈ ಶೈಕ್ಷಣಿಕ ವರ್ಷದಲ್ಲಿ ಜರಗಿಸಿದ ಮೌಲ್ಯಾoಕನ ಪರೀಕ್ಷೆಯಲ್ಲಿ ಉಪ್ಪಿನಂಗಡಿಯ ಪ್ರತಿಷ್ಠಿತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ 50 ಮಕ್ಕಳು ಹಾಗೂ 8ನೇ ತರಗತಿಯ 32 ಮಕ್ಕಳು ಭಾಗವಹಿಸಿ ಪರೀಕ್ಷೆ ಬರೆದಿದ್ದು ಎಲ್ಲಾ ಮಕ್ಕಳು ಉತ್ತೀರ್ಣರಾಗಿರುತ್ತಾರೆ
100% ವಿಜಯದೊಂದಿಗೆ ಸರಕಾರಿ ಶಾಲೆಯ ಮಕ್ಕಳು ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲದ ರೀತಿಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಪಡೆದಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುವಲ್ಲಿ ಮುತುವರ್ಜಿ ವಹಿಸಿದ ಶಿಕ್ಷಕವೃಂದ, ಪೋಷಕರು ಹಾಗೂ ಮಕ್ಕಳಿಗೆ ತುಂಬು ಹೃದಯದ ಅಭಿನಂದನೆಗಳು
ಮೊಯಿದಿನ್ ಕುಟ್ಟಿ ಸಂಚಾಲಕರು ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ (ರಿ)
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.