ಬಂಟ್ವಾಳ (www.vknews.in) : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವು ಬಾಳ್ತಿಲ ಗ್ರಾಮದ ಕಶೆಕೋಡಿ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನದಲ್ಲಿ ನಡೆಯಿತು.
ಶಾಲಾ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಡುವ ಮೂಲಕ ವಾರ್ಷಿಕ ಶಿಬಿರಕ್ಕೆ ಚಾಲನೆ ನೀಡಿದ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಮತ್ತು ಬಾಲವಿಕಾಸ ಟ್ರಸ್ಟ್ ಮಾಣಿ ಇದರ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ ಅವರು ಮಾತನಾಡಿ ಇಂದಿನ ಜೀವನ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಶಿಬಿರದ ಅನುಭವವು ಮರೆಯಲಾಗದ ಶಿಕ್ಷಣ ನೀಡಬಲ್ಲದು ಎಂದರು.
ಶಿಬಿರಾಗ್ನಿ ಕಾರ್ಯಕ್ರಮವನ್ನು ಕಶೆಕೋಡಿ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಕಂಟಿಕ ಗೋಪಾಲ್ ಶೆಣೈ ಉದ್ಘಾಟಿಸಿದರು,
ಸಮಾರೋಪ ಸಮಾರಂಭದಲ್ಲಿ ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಸಂಜೀವ ನಾಯಕ್ ಕಲ್ಲೇಗ ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಸರ್ವಧರ್ಮ ಸಮನ್ವಯತೆ ಗಮನಾರ್ಹವಾದದ್ದು. ಮಕ್ಕಳಿಗೆ ಅತ್ಯುತ್ತಮ ಸಂಸ್ಕಾರ ನೀಡಿದಾಗ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ, ಜೀವನ ಕೌಶಲ್ಯ ಪಡೆಯುವರು. ಅಂತಹ ಶಿಕ್ಷಣವನ್ನು ಬಾಲವಿಕಾಸ ವಿದ್ಯಾಸಂಸ್ಥೆ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಭಾರತ್ ಸ್ಕೌಟ್ಸ್ & ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ , ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆ ಶುಭ ಹಾರೈಸಿದರು. ಪುರೋಹಿತರಾದ ನಿತ್ಯಾನಂದ ಭಟ್, ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ವಿ .ಶೆಟ್ಟಿ, ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಉಪಸ್ಥಿತರಿದ್ದರು.
ಸ್ಕೌಟ್ – ಗೈಡ್ ವಿದ್ಯಾರ್ಥಿಗಳು ಶಾಲಾ ಕೈತೋಟದಲ್ಲಿ ತರಕಾರಿ ಬೀಜ ಬಿತ್ತನೆ ಮಾಡಿದರು. ಹೊರ ಸಂಚಾರದಲ್ಲಿ ರಿವಾ ವಾಟರ್ ಪ್ಯಾಕಿಂಗ್ ಇಂಡಸ್ಟ್ರೀಸ್ ಗೆ ಭೇಟಿ ನೀಡಿ ನೀರನ್ನು ಸಂಸ್ಕರಿಸಿ ಪ್ಯಾಕಿಂಗ್ ಮಾಡುವ ವಿಧಾನವನ್ನು ವಿದ್ಯಾರ್ಥಿಗಳು ವೀಕ್ಷಿಸಿದರು. ಶಿಬಿರ ನಡೆಯುವ ಸ್ಥಳಕ್ಕೆ ವನವಿದ್ಯಾ ಸಂಕೇತದ ಮೂಲಕ ಕಾಲ್ನಡಿಗೆಯಲ್ಲಿ ತೆರಳಿ ಧ್ವಜವಂದನೆ ಸಲ್ಲಿಸಲಾಯಿತು. ಕಸದಿಂದ ರಸ, ಕಿಮ್ಸ್ ಗೇಮ್, ಹೊರಾಂಗಣ ಆಟಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡರು. ವ್ಯಾಯಾಮ, ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು, ರಂಗ ನಿರ್ದೇಶಕ ಕೃಷ್ಣಪ್ಪ ಬಂಬಿಲರವರು “ರಂಗಕಲೆ – ಬದುಕಿನ ಸೆಲೆ” ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಗೈಡ್ಸ್ ವಿದ್ಯಾರ್ಥಿನಿಯರಾದ ನಿಧಿಶಾ, ದೇವಿಕಾ, ಪ್ರಗತಿ, ನಿವ್ಯಾ ರೈ, ವೈಷ್ಣವಿ ವಿವಿಧ ಕಾರ್ಯಕ್ರಮ ನಿರೂಪಿಸಿದರು. ಶಿಬಿರದ ನಾಯಕಿ ಲೇಡಿ ಸ್ಕೌಟ್ ಮಾಸ್ಟರ್ ಅನಿತಾಗೌರಿ ಸ್ವಾಗತಿಸಿ, ವಂದಿಸಿದರು. ಸ್ಕೌಟ್ ಮಾಸ್ಟರ್ಸ್ , ಗೈಡ್ ಕ್ಯಾಪ್ಟನ್ಸ್ , ಕಬ್ ಮಾಸ್ಟರ್, ಫ್ಲಾಕ್ ಲೀಡರ್ಸ್ ಗಳು, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು, ಪಾಲಕರು, ಹಿತೈಷಿಗಳು ಪಾಲ್ಗೊಂಡಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.