(www.vknews.in) ; ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ, ಮಾಜಿ ಸಚಿವ, ಮಾಜಿ ಸಂಸದ ವಿನಯಕುಮಾರ್ ಸೊರಕೆ ಕೊಡಗು ಜಿಲ್ಲೆ ಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಹಾದಿಯಲ್ಲಿ ಸುಳ್ಯ ನಗರಕ್ಕೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು ಸಾರ್ವಜನಿಕರನ್ನು ಭೇಟಿ ಮಾಡಿ ಮತಯಾಚಿಸಿದರು
ಈ ಸಂದರ್ಭದಲ್ಲಿ ಮಾಜಿ ಕೆಪೆಕ್ ನಿರ್ದೇಶಕ ಪಿ. ಎ. ಮಹಮ್ಮದ್, ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಉಸ್ತುವಾರಿ ಎಂ. ವೆಂಕಪ್ಪ ಗೌಡ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹಮೀದ್ ಕುತ್ತಾಮೊಟ್ಟೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿನಯಕುಮಾರ್ ಸೊರಕೆ ಬಿಜೆಪಿ ಈ ಬಾರಿ ಮಂಗಳೂರು ಕ್ಷೇತ್ರ ದಲ್ಲಿ ಸೋಲಿನ ಭೀತಿ ಕಾಡುತ್ತಿದ್ದು ಬೇರೆ ಬೇರೆ ರೀತಿಯಲ್ಲಿ ಮತದಾರರನ್ನು ದಾರಿ ತಪ್ಪಿಸುವ ಕೆಲಸ ಮಾಡಲು ಮುಂದಾಗಿದ್ದು, ನಮ್ಮ ಕಾರ್ಯಕರ್ತರು ಜಾಗರಾಗಿರುವಂತೆ ಎಚ್ಚರವಹಿಸಿ ಎಂದು ಹೇಳಿದರು ಸುಳ್ಯ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಸಂಶುದ್ದೀನ್, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ರಿಯಾಜ್ ಕಟ್ಟೆಕ್ಕಾರ್, ಧೀರ ಕ್ರಸ್ತ, ನಾಮ ನಿರ್ದೇಶಿತ ಸದಸ್ಯರುಗಳಾದ ಸಿದ್ದೀಕ್ ಕೋಕ್ಕೊ, ರಾಜು ಪಂಡಿತ್, ಸ್ನೇಹ ಸಂಗಮ ಆಟೋ ಯೂನಿಯನ್ ಅಧ್ಯಕ್ಷ ಹರಿಶ್ಚಂದ್ರ ಪಂಡಿತ್, ಜಿಲ್ಲಾ ಕೆಡಿಪಿ ಸದಸ್ಯೆ ಶ್ರೀಮತಿ ಸುಜಯ್ ಕೃಷ್ಣ,ಉದ್ಯಮಿ ಆದಂ ಹಾಜಿ ಕಮ್ಮಾಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ. ಜೆ., ನಜಿರ್ ಶಾಂತಿನಗರ, ಆಟೋ ರಿಕ್ಷಾ ಯೂನಿಯನ್ ನ ರಾದಾಕೃಷ್ಣ ಆರಂಬೂರು, ಹನೀಫ್ ಕುಂಡಿಲ್,ಕಲ್ಲು ಮುಟ್ಲು ಬೂತ್ ಅಧ್ಯಕ್ಷ ಅಶ್ರಫ್,ಇಸ್ಮಾಯಿಲ್ ಕುಂಬ್ಳೆಕ್ಕಾರ್ಸ್,ವಿದ್ಯಾರ್ಥಿ ನಾಯಕ ಇಮ್ಯಾನುವೆಲ್, ಮೊದಲಾದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.