ಬೆಂಗಳೂರು (www.vknews.in) : ಕ್ಷುಲ್ಲಕ ಕಾರಣಕ್ಕೆ ಪತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಗರದ ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಿರಿಜಾ ಮೃತ ಮಹಿಳೆಯಾಗಿದ್ದಾರೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿ.
ಕಳೆದ 8 ತಿಂಗಳ ಹಿಂದಷ್ಟೇ ಗಿರಿಜಾ ಮತ್ತು ನವೀನ್ ಮದುವೆ ಆಗಿದ್ದು, ಆರೋಪಿ ನವೀನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಪತಿ ಹಾಗೂ ಪತ್ನಿಯ ನಡುವೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದ್ದು, ಇದೇ ಕಾರಣಕ್ಕೆ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.