ಬಂಟ್ವಾಳ (www.vknews. in) : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಬಂಟ್ವಾಳ ತಾಲೂಕು ಸಮಿತಿ,ಮತ್ತು ಬಂಟ್ವಾಳ ತಾಲೂಕು ಭಾರತರತ್ನ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ ಇದರ ವತಿಯಿಂದ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಸಭಾ ಭವನದಲ್ಲಿ ಭಾರತರತ್ನ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು,
ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅನಾರೋಗ್ಯ ಪೀಡಿತರಿಗೆ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಹಣ್ಣು ಹಂಪಲುಗಳನ್ನು ಹಂಚಲಾಯಿತು,
ಈ ಸಂದರ್ಭ ಬಂಟ್ವಾಳ ತಾಲೂಕು ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಸಂತೋಷ್ ಭಂಡಾರಿಬೆಟ್ಟು, ಬಂಟ್ವಾಳ ತಾಲೂಕು ಭಾರತರತ್ನ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಸೆರ್ಕಳ, ಗೌರವಾಧ್ಯಕ್ಷ ಜನಾರ್ಧನ ಬೋಳಂತೂರು, ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ ಮತ್ತು ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಗೌರವ ಸಲಹೆಗಾರ ರಾಜ ಚೆಂಡ್ತಿಮಾರ್, ಕಾರ್ಯದರ್ಶಿ ಉಮೇಶ್ ಕೃಷ್ಣಾಪುರ, ಪ್ರಮುಖರಾದ ಕೇಶವ್ ನಾಯ್ಕ್, ಬಾಬು ದೊಂಪದಪಲ್ಕೆ, ವೆಂಕಟೇಶ್ ಕೃಷ್ಣಾಪುರ, ಮೋಹನ್ ಬಡಗಬೆಳ್ಳೂರು, ನಾರಾಯಣ ಬೊಂಡಾಲ, ರತೀಶ್ ಸರಪಾಡಿ, ಜಯಂತಿ ವಾಮದಪದವು, ಜಾನಕಿ ವಾಮದಪದವು, ಶೇಖರ್ ಬೀಯಪಾದೆ, ರವಿ ಬೀಯಪಾದೆ, ಸುರೇಶ್ ಅರ್ಬಿಗುಡ್ಡೆ, ಪ್ರೇಮ್ ರಾಜ್ ಪಲ್ಲಮಜಲು, ಹರೀಶ್ ಭಂಡಾರಿಬೆಟ್ಟು, ಚಂದ್ರಹಾಸ ಅರ್ಬಿಗುಡ್ಡೆ, ವಿಮಲ ಅರ್ಬಿಗುಡ್ಡೆ, ವೀಕ್ಷಿತ ಅರ್ಬಿಗುಡ್ಡೆ, ಗೀತಾ ಸರಪಾಡಿ, ಮೊದಲಾದವರು ಉಪಸ್ಥಿತರಿದ್ದರು,
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.