ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯಲು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 24 ಬುಧುವಾರ ಸಂಜೆ 6 ಗಂಟೆಯಿಂದ ಏಪ್ರಿಲ್ 26 ಸಂಜೆ 6 ಗಂಟೆಯವರೆಗೆ 48 ಗಂಟೆಗಳ ಕಾಲ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯಲು ಪೂರಕ ವಾತವರಣಕ್ಕಾಗಿ ಪ್ರಜಾಪ್ರತಿನಿಧಿಗಳ ಕಾಯ್ದೆ 1951, ಸೆಕ್ಷೆನ್ 126 ಪ್ರಕಾರ ಬಹಿರಂಗ ಪ್ರಚಾರ ಏಪ್ರಿಲ್ 24ರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಮತದಾರರ ಮೇಲೆ ಪ್ರಭಾವಬೀರಲು ರಾಜಕೀಯ ಲಾಭಕ್ಕಾಗಿ ನಗದು, ಉಡುಗೋರೆಗಳು ಹಾಗೂ ಮದ್ಯ ವಿತರಿಸುವುದನ್ನು ನಿಷೇಧಿಸಲಾಗಿದೆ. ಇಂತಹ ಚಟುವಟಿಕೆಗಳ ಮೇಲೆ ಕಣ್ಣಾವಲು ಇರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಿಷೇದಾಜ್ಞೆಯ ಸಮಯದಲ್ಲಿ ಅಕ್ರಮಕೂಟ ಹಾಗೂ ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿರ್ಭಂಧಿಸಲಾಗಿದೆ. ಐದು ಜನರ ಗುಂಪು ತಿರುಗಾಡುವುದನ್ನು ನಿರ್ಭಂಧಿಸಲಾಗಿದೆ. ಆದರೆ ಮತದಾನಕ್ಕೆ ಹಿಂದಿನ ದಿನ ಮನೆಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಬಹುದಾಗಿದೆ. ಆದರೆ ಐದು ಜನ ಮಾತ್ರ ಪ್ರಚಾರ ಮಾಡಿಸಬಹುದಾಗಿದೆ.
ರಾಜಕೀಯ ಪಕ್ಷಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪ್ರಚಾರ ಮಾಡುವ ಕಾರ್ಯಕರ್ತರು ಕ್ಷೇತ್ರದ ಮತದಾರರು ಅಲ್ಲದಿದ್ದ ಪಕ್ಷದಲ್ಲಿ ಕ್ಷೇತ್ರದಿಂದ ಹೊರಗೆ ಹೋಗುವಂತೆ ಸೂಚಿಸಲಾಗಿದೆ. ನಿಷೇದಾಜ್ಞೆಯ ಸಮಯದಲ್ಲಿ ಸಂತೆ, ಜಾತ್ರೆಗಳನ್ನು ನಡೆಸುವಂತಿಲ್ಲ. ಅಪಾಯಕಾರಿ ಆಯುಧಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ವೈವಾಹಿಕ ಕಾರ್ಯಕ್ರಮಗಳು ಅಂತ್ಯಕ್ರಿಯೆ ಹಾಗೂ ಚುನಾವಣಾ ಮಂಗ್ ಮತ್ತು ಡಿ-ಮಂಗ್ ಕೇಂದ್ರಗಳಿಗೆ ನಿಷೇದಾಜ್ಞೆ ಅನ್ವಯವಾಗುವುದಿಲ್ಲ ಎಂದು ಚುನಾವಣಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.