(www.vknews.in) ; ಮದ್ರಸ ಫತ್ಹೇ ಮುಬಾರಕ್ ಸಮಾರಂಭ : ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಅಧೀನದಲ್ಲಿ ಕಾರ್ಯಾಚರಿಸುವ ಮದ್ರಸಗಳ ಪ್ರಾರಂಭೋತ್ಸವ ಫತ್ಹೇ ಮುಬಾರಕ್ ಇದರ ಕರ್ನಾಟಕ ರಾಜ್ಯ ಮಟ್ಟದ ಉದ್ಘಾಟನಾ ಸಮಾರಂಭವು ಬಂಟ್ವಾಳ ತಾಲೂಕಿನ ಬೋಳಂತೂರು ಖುವ್ವತುಲ್ ಇಸ್ಲಾಂ ಸೆಕೆಂಡರಿ ಮದ್ರಸ ವಠಾರದಲ್ಲಿ ನಡೆಯಿತು.
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯಾಧ್ಯಕ್ಷ ಜೆಪ್ಪು ಅಬ್ದುರ್ರಹ್ಮಾನ್ ಮದನಿ ಸಭಾಧ್ಯಕ್ಷತೆ ವಹಿಸಿದರು. ಶೈಖುನಾ ಪಿ.ಕೆ.ಅಬೂಬಕರ್ ಮುಸ್ಲಿಯಾರ್ ಬೊಳ್ಮಾರ್ ಉಸ್ತಾದ್ ಸಭೆಯನ್ನು ಉದ್ಘಾಟಿಸಿದರು. ಸೆಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆಯವರು ಪುಟಾಣಿಗಳಿಗೆ ಅರಿವಿನ ಮೊದಲಾಕ್ಷರ ಬರೆಯಿಸಿದರು. ಸಯ್ಯಿದ್ ಶಿಹಾಬುದ್ದೀನ್ ಮದಕ ತಂಙಳ್,ಹಮೀದ್ ಹಾಜಿ ಕೊಡುಂಗಾಯಿ,ಸುಲೈಮಾನ್ ಸಖಾಫಿ,ಖಲೀಲ್ ಮಾಲಿಕೀ ಶುಭಾಶಂಸನೆ ನಡೆಸಿದರು.ಸುನ್ನೀ ವಿದ್ಯಾಭ್ಯಾಸ ಬೋರ್ಡಿನ ಮುಫತ್ತಿಶರಾಗಿ ಆಯ್ಕೆಯಾದ ಇಸ್ಮಾಯಿಲ್ ಸಅದಿಯವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಇಬ್ರಾಹೀಂ ಸಖಾಫಿ ಪುಂಡೂರು, ಹಾಫಿಳ್ ಹನೀಫ್ ಮಿಸ್ಬಾಹಿ,ಮುಫತ್ತಿಶ್ ಹಮೀದ್ ಮದನಿ, ಸ್ಥಳೀಯ ಜಮಾಅತ್ ಅಧ್ಯಕ್ಷ ಇಬ್ರಾಹಿಂ ಮಜಲ್ ಕೋಡಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಾಗಿದ್ದರು. ಎಸ್.ಜೆ.ಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ.ಕಾಮಿಲ್ ಸಖಾಫಿ ಸ್ವಾಗತಿಸಿ ಪಿ.ಎಂ.ಮುಹಮ್ಮದ್ ಮದನಿ ವಂದಿಸಿದರು.ರಾಜ್ಯ ಕಾರ್ಯದರ್ಶಿ ಅಬ್ದುಲ್ ಅಝೀಝ್ ನೂರಾನಿ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.