ಉಡುಪಿ (www.vknews.in) : ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟಿಕರಣ ಮಾಡುತ್ತಿರುವುದರ ಪರಿಣಾಮ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗೆ ಹಿಂದು ಯುವತಿ ಬರ್ಬರವಾಗಿ ಹತ್ಯೆಯಾಗಿದ್ದಾಳೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ ಯುವ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ, ಗೃಹ ಸಚಿವರು ಕೊಲೆಗೆ ವೈಯಕ್ತಿಕ ಕಾರಣ ಎಂದು ಹೇಳುತ್ತಿರುವುದು ವಿಪರ್ಯಾಸ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಲ್ಪಸಂಖ್ಯಾತರ ತುಷ್ಟೀಕರಣವೇ ಈ ಎಲ್ಲಾ ಘಟನೆಗಳಿಗೆ ಕಾರಣ. ರಾಜ್ಯದಲ್ಲಿ ಹೆಣ್ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಆತಂಕ ಕಾಡುತ್ತಿದೆ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.