ಹುಬ್ಬಳ್ಳಿ (www.vknews.in) : ಹಿಂದೂ ಜಾಗರಣ ವೇದಿಕೆ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ನೇಹಾ ಹತ್ಯೆ ಖಂಡಿಸಿ ಶಿವಪ್ಪ ನಾಯಕ ಸರ್ಕಲ್ ನಲ್ಲಿ ಪ್ರತಿಭಟನಾ ಸಭೆ ಶನಿವಾರ ನಡೆದಿದೆ.
ಪ್ರತಿಭಟನಾ ಸಭೆಯನ್ನು ಕುರಿತು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕರಾದ ದೇವರಾಜ್ ಅರಳಿಹಳ್ಳಿ ರವರು ಮಾತನಾಡಿ, ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ ನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ರವರ ಮಗಳಾದ ನೇಹಾ ಹಿರೇಮಠರವರ ಹತ್ಯೆ ಖಂಡಿಸಿ ಲವ್ ಜಿಹಾದ್ ಮಾಡಿ ಹತ್ಯೆ ಮಾಡಿರುವ ಫಯಾಝ್ ನನ್ನು ಗಲ್ಲುಗೇರಿಸಬೇಕು ಇಲ್ಲವಾದಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯ್ದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ, ಕಾಂಗ್ರೆಸ್ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡುವ ತಾಕತ್ತು ಇದ್ದರೆ ಸರ್ಕಾರ ನಡೆಸಿ ಇಲ್ಲವಾದಲ್ಲಿ ರಾಜೀನಾಮೆ ಕೊಡಿ ಎಂದು ಗುಡುಗಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.