ಸವಣೂರು (www.vknews.in) : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶವು ಕ್ಷೇತ್ರಾಧ್ಯಕ್ಷ ಅಬ್ದುಲ್ ರಝಾಕ್ ಕೆನರಾರವರ ಅದ್ಯಕ್ಷತೆಯಲ್ಲಿ ಸವಣೂರಿನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ರವರು ಇಂದಿನ ರಾಜಕೀಯ ಸನ್ನಿವೇಶವನ್ನು ವಿವರಿಸುತ್ತಾ ಪ್ರಸಕ್ತ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಪಡಿಸಲು ಮುಂದಡಿ ಇಟ್ಟಿದೆ, ಪ್ರಪಂಚದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಎಂಬ ಖ್ಯಾತಿ ಹೊಂದಿದ್ದ ಭಾರತವನ್ನು ಸಂಘಪರಿವಾರ ಪ್ರೇರಿತ ಬಿಜೆಪಿ ಸರ್ಕಾರ ನಿರಂಕುಶಾಧಿಕಾರದಿಂದ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಪ್ರತಿಪಕ್ಷ ಮುಕ್ತ ಭಾರತವನ್ನಾಗಿ ಮಾಡಲು ಹೊರಟಿದೆ ಮತ್ತು ಬಿಜೆಪಿ ಪಕ್ಷದ ದುರಾಡಳಿತದಿಂದ ದೇಶ ದಿವಾಳಿಯತ್ತ ಸಾಗುತ್ತಿರುವವಾಗ ಸಂಘ ಪರಿವಾರ ಪ್ರೇರಿತ ಬಿಜೆಪಿ ಕೈಯಿಂದ ಈ ಭವ್ಯ ಭಾರತವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸುತ್ತಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಪಣತೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಸಮಾರೋಪ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಎಸ್ಡಿಪಿಐ ದ.ಕ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್,ಸುಳ್ಯ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಉಪಸ್ಥಿತರಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಶರೀಫ್ ನಿಂತಿಕಲ್ ಕಾರ್ಯಕ್ರಮ ಸ್ವಾಗತಿಸಿ ಧನ್ಯವಾದಗೈದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.