ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್) ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ತಾಲೂಕು ಸ್ವೀಪ್ ಸಮಿತಿ ಹಮ್ಮಿಕೊಂಡಿದ್ದ ಮತದಾನದ ಜನಜಾಗೃತಿ ಕಾರ್ಯಕ್ರಮ ಮತದಾರನ ಮನಮುಟ್ಟಿದೆ.
ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಸ್ವೀಪ್ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿಟಿ ನಿಟ್ಟಾಲಿ ಅವರ ಮಾರ್ಗದರ್ಶನದಲ್ಲಿ ಶಿಡ್ಲಘಟ್ಟ ತಾಲೂಕು ಸಮಿತಿಯ ನೋಡಲ್ ಅಧಿಕಾರಿ ಜಿ. ಮುನಿರಾಜು ಮತ್ತು ಅವರ ತಂಡ ವಿಭಿನ್ನ ರೀತಿಯ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೂಲಕ ಮತದಾರರ ಮನಗೆಲ್ಲುವುದರಲ್ಲಿ ಯಶಸ್ವಿಯಾಗಿದ್ದಾರೆ.
oplus_0
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾರನೇ ಪ್ರಭು, ಚುನಾವಣೆಯಲ್ಲಿ ಯಾವುದೇ ರೀತಿಯ ಆಸೆ ಆಮಿಷಗಳಿಗೆ ಬಲಿಯಾಗದೆ ಸಂವಿಧಾನಾತ್ಮಕವಾಗಿ ಲಭಿಸಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಇಡೀ ಕ್ಷೇತ್ರಾದ್ಯಂತ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಿ ಗಮನ ಸೆಳೆಯಲಾಗಿದೆ.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಹಾಗೂ ನಗರಸಭೆಯ ವ್ಯಾಪ್ತಿಯ ಪ್ರತಿಯೊಂದು ವಾರ್ಡ್ಗಳಲ್ಲಿ ಮತದಾನದ ಮಹತ್ವ ಹಾಗೂ ಸಂವಿಧಾನದ ಆಶಯಗಳನ್ನು ಅರಿವು ಮೂಡಿಸುವ ಕಾರ್ಯಕ್ರಮಗಳು ಜನ ಆಕರ್ಷಣೀಯವಾಗಿತ್ತು, ತಾಲ್ಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಪ್ರತಿಯೊಂದು ಕಾರ್ಯಕ್ರಮಕ್ಕೆ ಸಹಾಯಕ ಚುನಾವಣಾಧಿಕಾರಿ ಜಾವೀದಾ ನಸೀಮಾ ಖಾನುಂ, ತಹಶೀಲ್ದಾರ್ ಬಿ.ಎನ್ ಸ್ವಾಮಿ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜ ಸೇವಕರು, ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿ ವರ್ಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮಾಧ್ಯಮದವರು ಸಾಥ್ ನೀಡಿದ್ದಾರೆ.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ತಾಲೂಕು ಸ್ವೀಪ್ ಸಮಿತಿಯ ಮೂಲಕ ವ್ಯಾಪಕ ಅರಿವು ಮತ್ತು ಜಾಗೃತಿ ಮೂಡಿಸಿದ ಫಲದಿಂದಾಗಿ ಮತದಾನ ಪ್ರಮಾಣವೂ ಸಹ ಹೆಚ್ಚಳಗೊಂಡಿದ್ದು ವಿಶೇಷ, ವಿಧಾನಸಭಾ ಚುನಾವಣೆಯ ಮಾದರಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಹ ಮತದಾನದ ಪ್ರಮಾಣ ಹೆಚ್ಚಳ ಮಾಡಬೇಕು ಎಂಬ ಉದ್ದೇಶದಿಂದಲೇ ವಿಭಿನ್ನ ರೀತಿಯ ಕಾರ್ಯಕ್ರಮಗಳು ಈ ಬಾರಿಯೂ ನಡೆಯಿತು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಚಟುವಟಿಕೆಗಳ ಮೂಲಕ ಮತದಾರರ ಗಮನಸೆಳೆದರು.
ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ರಂಗೋಲಿ ಬಿಡಿಸುವ ಮೂಲಕ ಮತದಾನದ ಜಾಗೃತಿ ಪ್ರಜಾಪ್ರಭುತ್ವದ ವ್ಯವಸ್ಥೆ ಸಂವಿಧಾನದ ಆಶಯಗಳನ್ನು ಜನರಿಗೆ ಮನಮುಟ್ಟುವಂತೆ ಮಾಡಿದರು, ತಾಲೂಕು ಸ್ವೀಪ್ ಸಮಿತಿಯ ಆಶ್ರಯದಲ್ಲಿ ಎಲ್ಲಾ ಇಲಾಖೆಯ ಮೂಲಕ ವಿಭಿನ್ನ ರೀತಿಯ ಚಟುವಟಿಕೆಗಳ ಆಯೋಜಿಸಿ ಮತದಾನದ ಬಗ್ಗೆ ಮತದಾರನಿಗೆ ಮಾಹಿತಿ ನೀಡುವ ಮತ್ತು ಅರಿವು ಮೂಡಿಸುವ ಕಾರ್ಯ ಯಶಸ್ವಿಯಾಗಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸ್ವೀಪ್ ಸಮಿತಿಯ ಮೂಲಕ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಇಡೀ ರಾಜ್ಯದ ಗಮನ ಸೆಳೆದಿದೆ ಕರ್ನಾಟಕ ರಾಜ್ಯದ ನೋಡಲ್ ಅಧಿಕಾರಿ ಪಿ.ಎನ್. ವಸ್ತ್ರದ್ ಅವರು ಶಿಡ್ಲಘಟ್ಟ ತಾಲೂಕಿಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದು ವಿಶೇಷ
ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಲು ಈಗಾಗಲೇ ಸ್ವೀಪ್ ಸಮಿತಿಗಳ ಮೂಲಕ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ ಜೊತೆಗೆ ಮತದಾನ ಮಾಡಲು ಬರುವ ಮತದಾರರಿಗೆ ಕುಡಿಯುವ ನೀರು, ನೆರಳು ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದೆ ಶಿಡ್ಲಘಟ್ಟ ತಾಲೂಕಿನಲ್ಲಿ ಸ್ವೀಪ್ ಚಟುವಟಿಕೆಗಳಲ್ಲಿ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಕ್ರೀಯವಾಗಿ ತೊಡಗಿಸಿಕೊಂಡಿರುವುದು ಸಂತಸ ತಂದಿದೆ.
ಪ್ರಕಾಶ್ ಜಿಟಿ ನಿಟ್ಟಾಲಿ ಚಿಕ್ಕಬಳ್ಳಾಪುರ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು
ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಈಗಾಗಲೇ ಸ್ವೀಪ್ ಸಮಿತಿಯ ಮೂಲಕ ವಿಭಿನ್ನ ರೀತಿಯ ಚಟುವಟಿಕೆಗಳ ಮೂಲಕ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ ಸಮಾಜದಲ್ಲಿರುವ ಪ್ರತಿಯೊಬ್ಬರು ಮತದಾನ ಮಾಡಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು.
ಜಾವೀದಾ ನಸೀಮಾ ಖಾನುಂ ಸಹಾಯಕ ಚುನಾವಣಾಧಿಕಾರಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ
ದೇಶದ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ನಾಯಕರನ್ನು ಆಯ್ಕೆ ಮಾಡಲು ಎಲ್ಲರು ಕಡ್ಡಾಯವಾಗಿ ಮತದಾನ ಮಾಡಿ
ಜಿ.ಮುನಿರಾಜು ಶಿಡ್ಲಘಟ್ಟ ತಾಲೂಕು ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ
ಮೊದಲಿಗೆ ಸೆಲ್ಫಿ ಮೂಲಕ ಅರಿವು ಕಾರ್ಯಕ್ರಮವನ್ನು ಆರಂಭಿಸಿ ಆನಂತರ ಗಿಡಗಳನ್ನು ವಿತರಿಸಿ ಮತದಾನದ ಅರಿವು ಮೂಡಿಸಲಾಯಿತು, ವಿವಿಧ ಮಹಿಳಾ ಸಂಘ ಸಂಸ್ಥೆಗಳ ಸಹಕಾರದಿಂದ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಅದೇ ರೀತಿಯಲ್ಲಿ ಬೈಕ್ ರ್ಯಾಲಿ, ಮೇಣದ ಬತ್ತಿ ಬೆಳಗಿಸುವ ಮೂಲಕ ಅರಿವು ಮೂಡಿಸಲಾಯಿತು ಶಿಡ್ಲಘಟ್ಟ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಸಂತೆ, ಜಾತ್ರೆಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು ಹಾಗೂ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಲಾಯಿತು ಕಳೆದ ಲೋಜಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಅರಿವು ಮೂಡಿಸಲಾಯಿತು, ರೈಲಿನಲ್ಲಿ ಪ್ರಯಾಣಿಸಿ ಪ್ರಯಾಣಿಕರಲ್ಲಿ ಮತದಾನ ಮಾಡುವಂತೆ ಪ್ರೇರಿಪಿಸಲಾಯಿತು, ವಿಕಲಚೇತನರು ತ್ರಿಚಕ್ರ ವಾಹನಗಳ ಮೂಲಕ ರ್ಯಾಲಿ ನಡೆಸಿ ಅರಿವು ಮೂಡಿಸಿದರು ಅದೇ ರೀತಿಯಲ್ಲಿ ಮಾಧ್ಯಮದವರು ಸಹ ಫೀಲ್ಡ್ಗಿಳಿದು ಸ್ವೀಪ್ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿದರು.
ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ,ಚೀಮಂಗಲ,ಬೋದಗೂರು,ಶಿಡ್ಲಘಟ್ಟ ನಗರದ ಸಿದ್ದಾರ್ಥನಗರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಖಿ ಮತಗಟ್ಟೆ ಕೇಂದ್ರ, ಶಿಡ್ಲಘಟ್ಟದ ರೇಷ್ಮೆ ಇಲಾಖೆಯ ಪಾರಂಪರಿಕ ಕಚೇರಿಯಲ್ಲಿ ಗಂಜಿಗುAಟೆಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಸಿದ್ದಪಡಿಸಿರುವ ವಸ್ತುಗಳ ಎಥನಿಕ್ ಮತಗಟ್ಟೆ ಕೇಂದ್ರ, ಮಳಮಾಚನಹಳ್ಳಿಯಲ್ಲಿ ಥೀಮ್,ಯಣ್ಣೂರು ಗ್ರಾಮದಲ್ಲಿ ಯುವಕರಿಗೆ ಮತದಾನ ಕೇಂದ್ರ ಹಾಗೂ ಶಿಡ್ಲಘಟ್ಟ ನಗರದ ಉಲ್ಲೂರುಪೇಟೆಯಲ್ಲಿ ವಿಕಲಚೇತನರಿಗಾಗಿ ಪ್ರತ್ಯೇಕ ಮತಗಟ್ಟೆ ಕೇಂದ್ರವನ್ನು ತೆರೆಯಲಾಗಿದೆ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.