ಉಳ್ಳಾಲ (www.vknews.in) : ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಭೆಯು ಕಲ್ಲಾಪು ಯುನಿಟಿ ಹಾಲ್ ನಲ್ಲಿ ನಡೆಯಿತು. ಎಸ್ ಡಿ ಪಿ ಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಎಸ್ ಎಂ ಬಶೀರ್ ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಸಭೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಜ್ ಕಡಂಬು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತ ದೇಶದ ಪ್ರಧಾನ ಮಂತ್ರಿಗಳೇ ಧರ್ಮದಾರಿತವಾಗಿ ಮಾತನಾಡುತ್ತಿದ್ದು ಇದು ಸಂವಿದಾನವನ್ನೇ ಅಣಕಿಸುವಂತಿದೆ ಎಂದು ಹೇಳಿದರು. ಮುಂದುವರೆಯುತ್ತಾ ನಾಳೆ ನಡೆಯುವ ಲೋಕಸಭಾ ಚುನಾವಣೆಯ ಮಹತ್ವ ವನ್ನು ವಿವರಿಸುತ್ತ ಯಾರು ಕೂಡಾ ಮತದಾನದಿಂದ ವಿಮುಖರಾಗಬಾರದು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವುದರೊಂದಿಗೆ ಇತರರನ್ನು ಪ್ರೇರಿಪಿಸಬೇಕು ಎಂದು ಕರೆ ಕೊಟ್ಟರು.
ನಮ್ಮ ಪಕ್ಷದ ಪ್ರಮುಖ ಗುರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯಡರ್ಶಿ ಜಮಾಲ್ ಜೋಕಟ್ಟೆ ಸಮಾರೋಪ ಭಾಷಣ ನಡೆಸಿದರು
ಸಭೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಕುದ್ರೋಳಿ, ಕಾರ್ಯದರ್ಶಿ ಅಷ್ಪಕ್ , ಎಸ್ ಡಿ ಪಿ ಐ ಮಂಗಳೂರು(ಉಳ್ಳಾಲ) ವಿಧಾನ ಸಭಾ ಕ್ಷೇತ್ರ ಉಪಾಧ್ಯಕ್ಷರಾದ ಫಾರೂಕ್ ಝಲ್ ಝಲ್, ಕಾರ್ಯದರ್ಶಿ ಅಶ್ರಫ್ ಮಂಚಿ, ಎಸ್ ಡಿ ಟಿ ಯು ಮಂಗಳೂರು ಕ್ಷೇತ್ರ ಅಧ್ಯಕ್ಷರಾದ ರಹಿಮಾನ್ ಮುನ್ನೂರು ಹಾಗೂ ಆಸಂಖ್ಯಾತ ಕಾರ್ಯಕರ್ತರು ಉಪಸ್ಥಿತರಿದ್ದರು. ಎಸ್ ಡಿ ಪಿ ಐ ಮಂಗಳೂರು ಕ್ಷೇತ್ರ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.