(www.vknews.in) : ಅಲ್ಪಸಂಖ್ಯಾತರಿಗೆ ಇಲ್ಲಿ ನ್ಯಾಯವಿಲ್ಲ, ಜೆಡಿಎಸ್ ಪಕ್ಷ ಕೋಮುವಾದಕ್ಕೆ ಮಾರಿ ಹೋಗಿದೆ ಎಂಬುದು ಬಹಳ ನೋವಿನ ಸಂಗಾತಿ, ಇನ್ನೂ ಈ ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲಿ ಅರ್ಥವಿಲ್ಲ.
ನಾನು ಮತ್ತು ನನ್ನ ಮಿತ್ರರು ಮೂರು ದಶಕಗಳಿಂದ ಈ ಜೆಡಿಎಸ್ ಪಕ್ಷದೊಂದಿಗೆ ಗುರುತಿಸಿಕೊಂಡು ಅನೇಕ ಜವಾಬ್ದಾರಿ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವರು, ಆದರೆ ಇವತ್ತು ಜೆಡಿಎಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯ ಅಧ್ಯಕ್ಷರು ಮಾಧ್ಯಮಕ್ಕೆ ನೀಡುತ್ತಿರುವ ಹೇಳಿಕೆಗಳು ನೋಡುತ್ತಿದ್ದರೆ ಇವರು ಅಧಿಕಾರದ ದಾಹಕ್ಕೆ ಸಿಲುಕಿ ಈ ಪಕ್ಷದ ಜಾತ್ಯಾತೀತ ನಿಲುವನ್ನು ಸಂಪೂರ್ಣ ಮಣ್ಣು ಮಾಡಲಾಗಿದೆ. ಮಾತ್ರವಲ್ಲ ನಮ್ಮಂತ ಜಾತ್ಯತೀತ ನಿಲುವನ್ನು ಹೊಂದಿದವರಿಗೆ ಅಲ್ಲಿ ಉಸಿರು ಕಟ್ಟುವ ವಾತಾವರಣ ಸೃಷ್ಟಿಯಾಗಿದೆ.
ಈಗ ಜೆಡಿಎಸ್ ಪಕ್ಷ ಕೋಮುವಾದಿ ಪಕ್ಷಗಳ ಜೊತೆ ಸೇರಿ ಅವರನ್ನು ಒಲೈಸಲು ಅಲ್ಪಸಂಖ್ಯಾತರನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ. ಇದನ್ನು ಮನಕೊಂಡ ಅಲ್ಪಸಂಖ್ಯಾತರು ಇಡೀ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನ ಸೇರುತ್ತಿದ್ದಾರೆ. ಇದರಿಂದಾಗಿ ಜೆಡಿಎಸ್ ಪಕ್ಷವು ಲಕ್ಷಾಂತರ ಕಾರ್ಯಕರ್ತರನ್ನು ಕಳಕೊಂಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬಹಳಷ್ಟು ನಷ್ಟ ಸಂಭವಿಸುವುದರಲ್ಲಿ ಸಂದೇಹವಿಲ್ಲ.
ಈ ಪಕ್ಷಕ್ಕಾಗಿ ರಾತ್ರಿ ಹಗಲು ದುಡಿದವರನ್ನು ಕ್ಯಾರೆ ಎನ್ನದೆ ನಡು ನೀರಿನಲ್ಲಿ ಕೈಬಿಟ್ಟಿದ್ದಾರೆ. ಈ ನಾಯಕರ ನಡವಳಿಕೆಯಿಂದ ನಮಗೆಲ್ಲರಿಗೂ ಬಹಳಷ್ಟು ನೋವು ತಂದಿದೆ. ಆದ್ದರಿಂದ ಇನ್ನು ಮುಂದೆ ಈ ಜೆಡಿಎಸ್ ಪಕ್ಷದಲ್ಲಿ ಮುಂದುವರಿಯಲು ನಮ್ಮಿಂದ ಸಾಧ್ಯವಿಲ್ಲ. ಆದುದರಿಂದ ಇನ್ನು ಮುಂದೆ ಜಾತ್ಯಾತೀತ ತತ್ವವನ್ನು ಉಳಿಸಿಕೊಂಡಿರುವ ಪಕ್ಷ ನಮ್ಮ ಮುಂದೆ ಇರುವುದು ಕಾಂಗ್ರೆಸ್ ಪಕ್ಷ ಮಾತ್ರ.
ಇವತ್ತು ರಾಜ್ಯದ ಚುಕ್ಕಾಣಿ ಹಿಡಿದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯವರು ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ಆಡಳಿತದಿಂದ ಬಡ ಜನರಿಗೆ ಸಿಗುತ್ತಿರುವ ಗ್ಯಾರಂಟಿ ಯೋಜನೆಗಳು ಹಾಗೂ ಈ ಜಿಲ್ಲೆಯಲ್ಲಿ ಶಾಂತಿಯನ್ನು ಕಾಪಾಡಲು ಪಣತೊಟ್ಟ ನಿಂತಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಇವರನ್ನು ಬೆಂಬಲಿಸುವುದು ಅತೀ ಅಗತ್ಯವಾಗಿದೆ.
ಆದುದರಿಂದ ಈ ಇಡೀ ಜಿಲ್ಲೆಯಲ್ಲಿ ನಾನು ಮತ್ತು ನಮ್ಮ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸುವುದೇ ಮುಖ್ಯ ಗುರಿಯಾಗಿದೆ ಎಂದು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರಿಗೂ, ಪಕ್ಷ ಈಗ ತೆಗೆದುಕೊಂಡಿರುವ ನಿಲುವನ್ನು ಖಂಡಿಸಿ ದೂರ ನಿಂತ ಕಾರ್ಯಕರ್ತರಿಗೂ ಕಳಕಳಿಯಿಂದ ನಮ್ಮ ವಿನಂತಿ ಮಾಡುತ್ತಿದ್ದೇನೆ.
ಇಬ್ರಾಹಿಂ ಗೋಳಿ ಕಟ್ಟೆ ರಾಜ್ಯ ಕಾರ್ಯದರ್ಶಿ ಜೆಡಿಎಸ್
ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹಾರೋನೂ ರಶೀದ್ . ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿ ಅಕೀಮ್ ಓ ಮಂಜುರ್. ಅಲ್ಪಸಂಖ್ಯಾತ ಜಿಲ್ಲಾ ಉಪಾಧ್ಯಕ್ಷ ಎಂ ಮಹಮ್ಮದ್. ತಾಲೂಕು ಉಪಾಧ್ಯಕ್ಷ ಪಿಎಂ ಇಬ್ರಾಹಿಂ ಪರಪುಂಜ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.