ಕಣ್ಣೂರು (www.vknews.in) : ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ ಪುನ್ನಚೇರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಕಾಸರಗೋಡು ಜಿಲ್ಲೆಯ ಚಿಟಾರಿಕಲ್ ಮಂಟಪದ ನಿವಾಸಿಗಳು. ಸೋಮವಾರ ರಾತ್ರಿ 10.45ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಮೃತರನ್ನು ಮಂಡಪಂ ಚೂರಿಕಾಟ್ನ ಸುಧಾಕರನ್ (49) ಮತ್ತು ಕಾಲಿಚನಡುಕ್ಕಂ ಶಾಸ್ತಂಪರಾ ಶ್ರೀಶೈಲದ ಕೆಎನ್ ಪದ್ಮಕುಮಾರ್ (59) ಎಂದು ಗುರುತಿಸಲಾಗಿದೆ. ಅವರೂ ಸೇರಿದಂತೆ ಮೂವರು ಪುರುಷರು, ಒಬ್ಬ ಮಹಿಳೆ ಮತ್ತು ಮಗು ವಾಹನದಲ್ಲಿದ್ದರು. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಸಾವನ್ನಪ್ಪಿದೆ.
ಪುನ್ನಚೇರಿ ಪೆಟ್ರೋಲ್ ಪಂಪ್ ಬಳಿ ಅಪಘಾತ ಸಂಭವಿಸಿದೆ. ಕಣ್ಣೂರು ಕಡೆಗೆ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಬರುತ್ತಿದ್ದ ಲಾರಿ ಕಾಞಂಗಾಡ್ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಲಾರಿಯಡಿಗೆ ಕಾರು ಬಿದ್ದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.