(www.vknews. in) ಸಂಸ್ಥಾಪನಾ ದಿನಾಚರಣೆ ಶಾಲಾಕಾಲೇಜುಗಳಲ್ಲಿ ನಡೆಯಲಿ;ಶೈಲಜಾ ಪುದುಕೋಳಿ ಆಶಯ
ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಶಾಲೆ ಕಾಲೇಜುಗಳಲ್ಲಿ ಆಚರಿಸುವಂತಾಗಬೇಕು ತನ್ಮೂಲಕ ಇಂದಿನ ಯುವ ಜನತೆಯಲ್ಲಿ ಕನ್ನಡದ ಅಭಿಮಾನ ಮತ್ತು ಮಮತೆ ತುಂಬಬೇಕು ಎಂದು ಕೆನರಾ ಕಾಲೇಜು ಕನ್ನಡ ಉಪನ್ಯಾಸಕಿ , ಕವಯಿತ್ರಿ ಶ್ರೀಮತಿ ಶೈಲಜಾ ಪುದುಕೋಳಿ ಹೇಳಿದರು. ದ ಕ ಜಿಲ್ಲಾ ಕ ಸಾ ಪ ಮಂಗಳೂರು ತಾಲೂಕು ಘಟಕ ಶ್ರೀ ಭಾರತೀ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಸಂದೇಶ ನೀಡಿದರು. ಅದ್ಭುತವಾದ ಸಮಾಜಮುಖೀ ಕಾರ್ಯಗಳನ್ನು ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ದೇವದೂತರಂತೆ ಕಂಡುಬರುತ್ತಾರೆ , ಅವರ ಆಶಯದಂತೆ ಇಂದಿಗೂ ಪರಿಷತ್ತು ಕನ್ನಡದ ಧ್ವನಿಯಾಗಿ ಹತ್ತು ಹಲವು ಮಹತ್ತರ ಕಾರ್ಯಗಳನ್ನೆಸಗುತ್ತಾ ಮುಂದುವರಿಯುತ್ತಿರುವುದು ಹೆಮ್ಮೆಯ ವಿಚಾರ. ಶಾಲೆ ಕಾಲೇಜುಗಳಲ್ಲಿ ಕಾರ್ಯಕ್ರಮ ಮಾಡುವಲ್ಲಿ ಉತ್ಸಾಹ ತೋರುತ್ತಿರುವ ಮಂಗಳೂರು ತಾಲೂಕು ಘಟಕವನ್ನು ಶ್ಲಾಘಿಸಿದರು. ಕ ಸಾ ಪ ಕನ್ನಡಿಗರ ಏಕತೆಯ ಸಂಕೇತವೆಂದೂ ಅವರು ನುಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಾಡೋಜ ಕಯ್ಯಾರರ ಸುಪುತ್ರ , ನಿವೃತ್ತ ಪ್ರಾಧ್ಯಾಪಕ ಡಾ| ಪ್ರಸನ್ನ ರೈ ಕಲ್ಲಕಳಿಯ ಕನ್ನಡದ ಬಗೆಗೆ ಅಭಿಮಾನದ ಮಾತುಗಳನ್ನಾಡುತ್ತಾ ಕಯ್ಯಾರರ ಸಾಹಿತ್ಯದ ಹಾದಿಯನ್ನೂ ಜೊತೆಯಾಗಿ ಸಹಕರಿಸಲು ತಮಗೊದಗಿ ಬಂದ ಭಾಗ್ಯವನ್ನೂ ನೆನಪಿಸಿಕೊಂಡರು. ಕ ಸಾ ಪ ಕೇಂದ್ರ ಮಾರ್ಗದರ್ಶಕ ಸಮಿತಿ ಸದಸ್ಯ ಡಾ. ಮುರಲೀಮೋಹನ್ ಚೂಂತಾರು ಮಾತನಾಡಿ ಕ ಸಾ ಪ ಸಂಸ್ಥಾಪನೆಯ ಸ್ಫೂರ್ತಿ ನಮ್ಮೆಲ್ಲರಲ್ಲಿ ಚಿರಸ್ಥಾಯಿ ಎಂದು ತಿಳಿಸಿದರು. ಘಟಕದ ಅಧ್ಯಕ್ಷ ಡಾ | ಮಂಜುನಾಥ ಎಸ್. ರೇವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರತ್ನಾವತಿ ಜೆ ಬೈಕಾಡಿ ಕನ್ನಡ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅರುಣಾ ನಾಗರಾಜ್ , ಸನತ್ ಕುಮಾರ್ ಜೈನ್ , ಕಾ ವೀ ಕೃಷ್ಣದಾಸ್ , ಗುರು ಪ್ರಸಾದ್ , ಸತ್ಯವತಿ ಭಟ್ ಕೊಳಚಪ್ಪು , ಡಾ. ಸುರೇಶ ನೆಗಳಗುಳಿ , ಮಹಾಲಿಂಗ ಪಾಟಾಳಿ , ದಯಾನಂದ ರಾವ್ ಕಾವೂರು ಹಾಗೂ ಸಾಹಿತ್ಯಾಭಿಮಾನಿಗಳು ಉಪಸ್ಥಿತರಿದ್ದರು. ಗೌ. ಕಾರ್ಯದರ್ಶಿ ಎನ್. ಗಣೇಶ್ ಪ್ರಸಾದ್ ಜೀ ಸ್ವಾಗತಿಸಿದರು. ಗೌ. ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ನಿರೂಪಿಸಿ , ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.