ಬಂಟ್ವಾಳ (www.vknews. in) : ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ. ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ನವ ವಿವಾಹಿತ ಸುನಿಲ್ ಗಾಯಗೊಂಡವರು.
ಅನಿಲ್ ಎಂಬವರು ಅವರ ಅತ್ತಿಗೆ ಸ್ವಾತಿಯವರನ್ನುಪಂಜಿಕಲ್ಲುವಿನಿಂದ ನರಿಕೊಂಬು ಮನೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಘಟನೆ ನಡೆದಿದೆ.
ಸುನಿಲ್ ವಿದೇಶದಲ್ಲಿ ಉದ್ಯೋಗಿಯಾಗಿದ್ದು, ಎಪ್ರಿಲ್ 28 ರಂದು ವಿವಾಹವಾಗಿದ್ದರು. ಇಂದು ಪತ್ನಿ ಹಾಗೂ ಕುಟುಂಬದವರ ಜೊತೆ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ಮನೆಗೆ ವಾಪಸು ಆಗುವ ವೇಳೆ ಇನ್ನೇನು ಮನೆಗೆ ಅರ್ಧ ಕಿ.ಮೀ.ದೂರದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡು ಕಾರುಗಳ ಎದುರು ಭಾಗ ಜಖಂಗೊಂಡಿದೆ. ಅಪಘಾತದಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಬೇಟಿ ನೀಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.