(www.vknews. in) ; ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿಯಾದ ಮನೆಗಳಿಗೆ ಮೇ 09 ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಭೇಟಿ ನೀಡಿದರು. ದಿವಂಗತ ಅಭಿರ ನಾಗೇಶ ರವರ ಮನೆಯು ಸಂಪೂರ್ಣ ಹಾನಿಯಾಗಿದ್ದು ಸುಮಾರು 05 ಲಕ್ಷ ನಷ್ಟ ಉಂಟಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ , ತಹಸೀಲ್ದಾರ್ ಮಂಜುನಾಥ್, ಜೆ ಇ ಮಂಜುನಾಥ್ , ಆರ್. ಐ ಅವಿನ್, ಜೆ ಇ ಮಣಿಕಂಠ ಅವರನ್ನು ಸಂಪರ್ಕಿಸಿ ತಕ್ಷಣ ಪರಿಹಾರ ನೀಡಬೇಕೆಂದು ವಿನಂತಿಸಿದರು.
ಹಾಗು ಬಾಗಶ ಹಾನಿಯಾದ ಇತರ 2 ಮನೆಗಳಿಗೂ ಪರಿಹಾರ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಸಂಪಾಜೆ ಗ್ರಾಮದಲ್ಲಿ ಭೂಕಂಪನ, ಜಲ ಪ್ರಳಯ, ನೆರೆ ಮುಂತಾದ ಪ್ರಾಕೃತಿಕ ವಿಕೋಪಗಳು ಆಗಾಗ ನಡೆಯುತ್ತಿರುವುದರಿಂದ ಹೆಚ್ಚಿನ ಪರಿಹಾರವನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿರುತ್ತಾರೆ.ಇ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.