Oplus_0
ಬೆಂಗಳೂರಿನ ಕೃಷ್ಣ ಕಚೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಬಲ್ಕಿಸ್ ಬಾನು ಅವರು ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿದ್ದಕ್ಕಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಆಯೋಗ ಹಾಗೂ ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆಯಾಗಿರುವ ಅವರ ಸೇವೆಯನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷ ಈ ಬಾರಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
ಕರ್ನಾಟಕ ಕಾಂಗ್ರೆಸ್ ಪಕ್ಷವು ಮೊದಲಿಂದಲೂ ಮಹಿಳೆಯರಿಗೆ ಆದ್ಯತೆ ನೀಡುತ್ತಾ ಬಂದಿದ್ದು ಒಂದು ಕಡೆ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ ಮತ್ತೊಂದೆಡೆ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲಾಗಿದೆ.
ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಅಲ್ಪಸಂಖ್ಯಾತರ ಮುಖಂಡರ ನಿಯೋಗ ಭೇಟಿ ಮಾಡಿ ಈ ಬಾರಿ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಮುಸ್ಲಿಂ ಸಮುದಾಯಕ್ಕೆ ಎರಡು ಹಾಗೂ ಕ್ರೈಸ್ತ ಸಮುದಾಯಕ್ಕೆ ಒಂದು ಸ್ಥಾನವನ್ನು ಮೀಸಲಿಡಬೇಕೆಂದು ಮನವಿ ಮಾಡಿದ್ದು ಇಲ್ಲಿ ಸ್ಮರಿಸಬಹುದಾಗಿದೆ.
ವರಿಷ್ಠರು ಮುಸ್ಲಿಂ ಮುಖಂಡರ ಬೇಡಿಕೆಗೆ ಅನುಗುಣವಾಗಿ ಕೇವಲ ಒಂದು ಸ್ಥಾನ ಮಾತ್ರ ನೀಡಿದು ಅದೇ ರೀತಿ ಕ್ರೈಸ್ತ ಸಮುದಾಯದ ಐವನ್ ಡಿಸೋಜ ಅವರಿಗೆ ಅವಕಾಶ ಕಲ್ಪಿಸಿದೆ ಆದರೂ ಸಹ ಜನಸಂಖ್ಯೆಗೆ ಅನುಗುಣವಾಗಿ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರಿಗೆ ವಿಧಾನ ಪರಿಷತ್ ಚುನಾವಣೆಗೆ ಅವಕಾಶ ಕಲ್ಪಿಸಿಲ್ಲ ಎಂಬ ಅಸಮಾಧಾನವು ಕೇಳಿಬಂದಿದೆ.
ವರದಿ: ತಮೀಮ್ ಪಾಷ ಶಿಡ್ಲಘಟ್ಟ.
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.