ಚಿಕ್ಕಬಳ್ಳಾಪುರ (ವಿಶ್ವಕನ್ನಡಿಗ ನ್ಯೂಸ್ ): ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ದೂರದೃಷ್ಟಿ ಹೊಂದಿದೆ. ಮಧ್ಯಮ ವರ್ಗ, ಕೆಲ ಮಧ್ಯಮ ವರ್ಗಕ್ಕೆ ಅನುಕೂಲವಾಗುವಂತೆ ವಸತಿ ಯೋಜನೆಗಳನ್ನು ರೂಪಿಸಿದೆ ಎಂದು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ ಬಿ ರೆಡ್ಡಿ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಮಹಿಳೆಯರು, ಯುವಕರ ಆರ್ಥಿಕ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಬಜೆಟ್ನಲ್ಲಿ ಉಲ್ಲೇಖಿಸಿದ್ದು, ಭವಿಷ್ಯದ ರಾಷ್ಟ್ರ ನಿರ್ಮಾಣಕ್ಕೆ ಅನುಕೂಲಕರವಾಗಿದೆ. ತೆರಿಗೆ ಹೊರೆಯನ್ನು ಜನರ ಮೇಲೆ ಹೇರದೆ ಸರ್ವ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ ಎಂದಿದ್ದಾರೆ.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.