ಚಿಕ್ಕಬಳ್ಳಾಪುರ (ವಿಶ್ವ ಕನ್ನಡಿಗ ನ್ಯೂಸ್) : ಕೋವಿಡ್ – 19 ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಕೊರೋನಾ ಸೋಂಕು ಭೀತಿಯಿಂದ ಪ್ರತಿಯೊಬ್ಬರೂ ಆಂತಕದಲ್ಲಿದ್ದಾಗ ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವುದಲ್ಲದೇ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ ಎಂದು ತಾಲ್ಲೂಕಿನ ಮಾನ್ಯ ಯೋಜನಾಧಿಕಾರಿಯಾದ ಮಹೇಶ್ ಹೆಚ್. ತಿಳಿಸಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ವತಿಯಿಂದ ಅಜ್ಜವರ ವಲಯದ ಪ್ರಾಥಮಿಕ ಆರೋಗ್ಯ ಕೇಂದ್ರÀ ದಿಬ್ಬೂರಿನಲ್ಲಿ ಇಂದು ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು ಆಶಾ ಕಾರ್ಯಕರ್ತೆಯರಿಗೆ ಇಂದು ಪ್ರತಿಯೊಬ್ಬರು ಗೌರವ ಸಲ್ಲಿಸಬೇಕು, ಜನಸಾಮಾನ್ಯರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆ ಅನನ್ಯವಾದದ್ದು ಅವರ ಸೇವೆಯನ್ನು ಗುರುತಿಸಿ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ (ರಿ) ವಲಯ ಮಟ್ಟದ 30 ಆಶಾ ಕಾರ್ಯಕರ್ತೆಯರ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನ ನೌಕರ ಸಂಘದ ಅz್ಯsÀಕ್ಷರಾದ ರಾಮಕೃಷ್ಣರೆಡ್ಡಿ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ, ಹಾಲು ಡೈರಿ ಅಧ್ಯಕ್ಷರಾದ ಶಿವಣ್ಣ, ಗ್ರಾಮ ಪಂಚಾಯ್ತಿ ಸದಸ್ಯರಾದ ಮುನಿರಾಜು, ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಿನ ನರ್ಸ್ ಶಕುಂತಲ, ಅಜ್ಜವರ ವಲಯದ ಮೇಲ್ವಿಚಾರಕರು ಸುನೀತಾ ಶೆಟ್ಟಿ, ಸೇವಾ ಪ್ರತಿನಿಧಿ ಗಾಯಿತ್ರಿ, ಒಕ್ಕೂಟದ ಕಾರ್ಯದರ್ಶಿ ಗಂಗರತ್ನಮ್ಮ ಇನ್ನಿತರರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.