ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ):ಕೋಟ ಪೊಲೀಸ್ ಠಾಣೆಯಲ್ಲಿ ಎಎಸ್ಐಯಾಗಿ ಕಾರ್ಯನಿರ್ವಹಿಸುತ್ತಿದ್ದ ಆನಂದ ವೆಂಕಟರಾಮ್(60) ಮೆದಳಿನ ಸಂಬಂಧದ ಕಾಯಿಲೆಗೆ ತುತ್ತಾಗಿ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಕಳೆದ ಭಾನುವಾರ ನಿವೃತ್ತಿ ಹೊಂದಿದ ಆನಂದ್ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಸಿದ್ದರು. ನಂತರ ಊಟ ಮಾಡುತ್ತ ಎರಡು ತುತ್ತು ಅನ್ನ ಸ್ವೀಕರಿಸಿದ ಅವರು ಅಲ್ಲೇ ಕುಸಿದು ಬಿದ್ದಿದ್ದರು. ತಕ್ಷಣ ಸಹೊದ್ಯೋಗಿಗಳು ಕೋಟ ಪಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಕೊನೆಯುಸಿರೆಳೆದರು. ಬೈಂದೂರು ನಿವಾಸಿ ಆನಂದ್ ಅವರು ಮೂಡಬಿದಿರೆ, ಕೋಟ, ಶಂಕರನಾರಾಯಣ, ಗಂಗೊಳ್ಳಿ, ಕಾಪು ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಎಎಸ್ಐ ಆಗಿ ಪದೋನ್ನತ್ತಿ ಹೊಂದಿ ಮತ್ತೆ ಕೋಟ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.