ಡಾ|| ಮುರಲೀ ಮೋಹನ ಚೂಂತಾರು
(www.vknews.com) : ಹೊಸದಾಗಿ ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ (ಮುಖ್ಯಪಾಲಕ) ಆಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ಅವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿ ಆರಕ್ಷಕ ಮಹಾ ನಿರ್ದೇಶಕರು ಹಾಗೂ ಗೃಹರಕ್ಷಕ ದಳ ಮತ್ತು ಪೌರರಕ್ಷಣೆ ಇದರ ಮಹಾ ಸಮಾದೇಷ್ಟರು, ಕರ್ನಾಟಕ ರಾಜ್ಯ, ಬೆಂಗಳೂರು ಇವರು ಆದೇಶ ನೀಡಿರುತ್ತಾರೆ.
ದ.ಕ. ಜಿಲ್ಲೆಯಲ್ಲಿ ಪೌರರಕ್ಷಣಾ ತಂಡವನ್ನು ರಚಿಸಿ, ತರಬೇತಿ ನೀಡಿ ಸಾರ್ವಜನಿಕ ಆಸ್ತಿಪಾಸ್ತಿ ಮತ್ತು ಜನರ ರಕ್ಷಣೆಗೆ ಪೂರಕವಾದ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಹೊಣೆಗಾರಿಕೆಯನ್ನು ಪೌರರಕ್ಷಣಾ ದಳದ ಮುಖ್ಯ ಪಾಲಕರಿಗೆ ನೀಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.