ಮುದ್ದೇಬಿಹಾಳ (www.vknews.com) : ಕಳೆದ ಎರಡೂವರೆ ತಿಂಗಳಿನಿಂದ ಕೋವಿಡ್-19 ನಿಂದಾಗಿ ಸಾಮೂಹಿಕ ಪ್ರಾರ್ಥನಾ ಸ್ಥಳಗಳನ್ನು ಬಂದ್ ಆಗಿದ್ದರಿಂದ ಮುಸ್ಲಿಂ ಬಾಂಧವರು ಮಸೀದಿಯಲ್ಲಿ ನಮಾಜ್ ಮಾಡದೇ ತಮ್ಮ ತಮ್ಮ ಮನೆಗಳಲ್ಲಿಯೇ ನಮಾಜ್ ಮಾಡುವ ಮೂಲಕ ಸರಕಾರ ಆದೇಶವನ್ನು ಪಾಲಿಸಿದ್ದರು.ಅದರಂತೆ ಜೂ.8 ರಿಂದ ಲಾಕ್ಡೌನ್ ಸಡಿಲಿಸಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟಿದ್ದರಿಂದ ಮುದ್ದೇಬಿಹಾಳ ಪಟ್ಟಣದ ವಿವಿಧ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ನ್ನು ಸರಕಾರದ ನಿರ್ದೇಶನಗಳನ್ನು ಅನುಸರಿಸುವ ಮೂಲಕ ಮಾಡಲಾಯಿತು.
ಮಾಸ್ಕ್ ವಿತರಿಸಿದ ಮಸೀದಿ ಆಡಳಿತ ಮಂಡಳಿ: ಕೊರೊನಾ ವೈರಸ್ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿರುವ ವಿವಿಧ ಮಸೀದಿಗಳ ಆಡಳಿತ ಮಂಡಳಿಗಳ ಸದಸ್ಯರು ಸಾಮೂಹಿಕ ಪ್ರಾರ್ಥನೆಯ ವೇಳೆಯೂ ಮುನ್ನೆಚ್ಚರಿಕೆ ವಹಿಸಿದ್ದಾರೆ.ಪಟ್ಟಣದ ಮಹಿಬೂಬ ನಗರದ ಮಕ್ಕಾ ಮಸೀದಿಯಲ್ಲಿ ಶುಕ್ರವಾರದಂದು ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೂ ಮುನ್ನ ಪ್ರಾರ್ಥನೆಗೆ ತೆರಳುವವರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು.ಅಲ್ಲದೇ ಸ್ಯಾನಿಟೈಸರ್ ಬಳಸಿ ಪರಸ್ಪರ ಸಾಮಾಜಿಕ ಅಂತರ ಪಾಲನೆಯೊಂದಿಗೆ ನಮಾಜ್ ಮಾಡಲಾಯಿತು.
ಈ ವೇಳೆ ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳಾದ ಮಹಿಬೂಬ ಟಕ್ಕಳಕಿ, ಬಾಬು ಗೊಳಸಂಗಿ ಅಂಜುಮನ್ ಇಸ್ಲಾಂ ಕಮಿಟಿ ಸದಸ್ಯ ಹಾಜಿ ತೆಗ್ಗಿ, ಪುರಸಭೆ ಮಾಜಿ ಸದಸ್ಯ ಅಬ್ದುಲಅಜೀಜ ನಾಯ್ಕೋಡಿ,ಹುಸೇನ ನಾಯ್ಕೋಡಿ ಸಾಹೇಬಲಾಲ ದೇಸಾಯಿ ಗುಲಾಮಮೊಹ್ಮದ ದಫೇದಾರ ಸಲೀಮ ನಾಯ್ಕೋಡಿ ಮತ್ತಿತರರು ಇದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.