ದೇರಳಕಟ್ಟೆ (www.vknews.com) : ಮಂಗಳೂರಿನ ಪೂರ್ವ ವಲಯದ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಸದಸ್ಯತ್ವ ನೋಂದಾವಣೆಗೆ ಇಂದು ದೇರಳಕಟ್ಟೆ ಜಲಾಲ್ ಭಾಗ್ ನಲ್ಲಿರುವ ಟೇಸ್ಟಿ ರೆಸ್ಟೋರೆಂಟ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಗೌರವ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಕೋವಿಡ್ ಲಾಕ್ ಡೌನ್ ನಂತರ ಬಸ್ಸು ನೌಕರರು ಅತೀ ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ಕಡೆ ಹೆಚ್ಚಿನ ಬಸ್ಸು ನೌಕರರು ಕೆಲಸವಿಲ್ಲದೇ ಕಂಗಾಲಾಗಿದ್ದರೆ ಇನ್ನೊಂದೆಡೆ ಕೋವಿಡ್ ಹೆಸರಿನಲ್ಲಿ ಇಲ್ಲಿನ ಆಸ್ಪತ್ರೆಗಳು ಲೂಟಿಗೆ ಇಳಿದಿದೆ. ಹೀಗಿರುವಾಗ ಈಗ ಇಲ್ಲಿ ಸಂಚರಿಸುತ್ತಿರುವ ಸೀಮಿತ ಸಂಖ್ಯೆಯ ಬಸ್ಸುಗಳ ಚಾಲಕ , ನಿರ್ವಾಹಕರು ಕೊರೊನಾ ಭೀತಿಯ ನಡುವೆಯೇ ಕೆಲಸ ಮಾಡುತ್ತಿದ್ದು ಇವರನ್ನು ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು, ಕಾರ್ಯದರ್ಶಿ ಜಗದೀಶ್, ಕೋಶಧಿಕಾರಿ ಮಹಮ್ಮದ್ ಅಶ್ರಫ್ , ಡಿವೈಎಫ್ಐ ಜಿಲ್ಲಾ ನಾಯಕ ರಫೀಕ್ ಹರೇಕಳ, ಶ್ರೀನಾಥ್ ಕುಳಾಯಿ, ಕಾರ್ಮಿಕ ಮುಂದಾಳು ಇಬ್ರಾಹಿಂ ಮದಕ , ಹಿರಿಯ ಬಸ್ಸು ಚಾಲಕ ಮುನೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಝೀರ್ ಕಾರ್ಯಕ್ರಮ ನಿರ್ವಹಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.