(www.vknews.com) : ಕರ್ನಾಟಕ ರಾಜ್ಯದ ವಕ್ಫ್ ಬೋರ್ಡ್ ನ ಅಧ್ಯಕ್ಷರು ಮುಸ್ಲಿಂ ಸಮುದಾಯದ ಅಗ್ರಗಣ್ಯ ನಾಯಕರೂ ಆಗಿರುವಂತಹ ಡಾ. ಮುಹಮ್ಮದ್ ಯೂಸುಫ್ ಸಾಹೇಬ್ ರವರ ನಿಧನಕ್ಕೆ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯು ತೀವ್ರವಾಗಿ ಸಂತಾಪವನ್ನು ವ್ಯಕ್ತಪಡಿಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಕಣಚೂರು ಮೋನು ಹಾಜಿಯವರು, ಯೂಸುಫ್ ಹಾಜಿಯವರು ಮುಸ್ಲಿಂ ಸಮುದಾಯಕ್ಕೆ ನೀಡಿದಂತಹ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ. ವಕ್ಫ್ ನ ಅಭಿವೃದ್ಧಿಗಾಗಿ ಸಾಕಷ್ಟು ದುಡಿದು ಇನ್ನು ಕೂಡಾ ವಕ್ಫ್ ಗೆ ಸಂಬಂಧಪಟ್ಟಂತೆ ಹಲವಾರು ಕೆಲಸ ಕಾರ್ಯಗಳಲ್ಲಿ ಮುಂದುವರಿಯುತ್ತಿದ್ದರು.
ಈ ಒಂದು ಕಾಲದಲ್ಲಿ ಅವರ ಅಗಲುವಿಕೆಯು ಸಮಾಜಕ್ಕೆ ಹಾಗೂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.ಅವರಿಗೆ ಅಲ್ಲಾಹು ಮಗ್ಫಿರತ್ ಕರುಣಿಸಲಿ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.