(www.vknews.in)ಮಂಗಳೂರು:-ಮಂಗಳೂರು ಇಲ್ಲಿನ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ 58 ನೇ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ರವಿವಾರ ಜಿಲ್ಲಾ ಕಚೇರಿ ಆವರಣದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ||ರಾಜೇಂದ್ರ.ಕೆ.ವಿ.( l.A.S.) ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು
ನಂತರ ಬೆಳ್ಳಾರೆ ಪ್ರಭಾರ ಘಟಕಾಧಿಕಾರಿ ವಸಂತ ಗೃಹರಕ್ಷಕರಿಗೆ ಪ್ರತಿಜ್ಞೆ ವಿಧಿ ಭೋಧನೆ ಮಾಡಿದರು ನಂತರ ಗೃಹರಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಜಿಲ್ಲೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಜಿಲ್ಲೆಯಲ್ಲಿ ನೆರೆ ಬಂದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸೇರಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಹಾಗೂ ಕೊರೋನ ಸಂದರ್ಭದಲ್ಲಿ ಕೊರೋನ ವಾರಿಯರ್ಸ್ ಆಗಿ ಸೇವೆ ಅತ್ಯಂತ ಶ್ಲಾಘನೀಯ ಎಂದರು ಹಾಗೂ ಜಿಲ್ಲೆಯ ಎಲ್ಲಾ ಗೃಹರಕ್ಷಕರಿಗೆ ಜಿಲ್ಲಾಡಳಿತ ಪರವಾಗಿ ಗೃಹರಕ್ಷಕರ ದಿನಾಚರಣೆ ಶುಭಾಶಯಗಳು ತಿಳಿಸಿದರು ಮುಖ್ಯ ಅಥಿತಿಯಾಗಿ ಆಗಮಿಸಿದ ಮಾಜಿ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಶಿವಪ್ರಸಾದ್ ರೈ ಶುಭ ಹಾರೈಸಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕದಳ ಹಾಗೂ ಪೌರರಕ್ಷಣಾದಳದ ಸಮಾದೇಷ್ಟರಾದ ಡಾ||ಮುರಲೀ ಮೋಹನ್ ಚೂಂತಾರುರವರು ವಾರ್ಷಿಕ ವರದಿ ಮಂಡಿಸಿದರು
ಸನ್ಮಾನ ಕಾರ್ಯಕ್ರಮ:- ಕಾರ್ಯಕ್ರಮದಲ್ಲಿ ಸುರತ್ಕಲ್ ಪ್ರಭಾರ ಘಟಕಾಧಿಕಾರಿ ರಮೇಶ್, ಬೆಳ್ತಂಗಡಿ ಪ್ರಭಾರ ಘಟಕಾಧಿಕಾರಿ ಜಯಾನಂದ,ಮೂಡಬಿದ್ರೆ ಘಟಕದ ಪ್ರಭಾರ ಘಟಕಾಧಿಕಾರಿ ಪಾಂಡಿರಾಜ್,ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶಿವಪ್ಪ ನಾಯ್ಕ, ವಿಟ್ಲ ಘಟಕದ ಪ್ರಭಾರ ಘಟಕಾಧಿಕಾರಿ ಸಂಜೀವ ಇವರನ್ನು ಜಿಲ್ಲಾಧಿಕಾರಿಗಳು ಜಿಲ್ಲಾ ಕಚೇರಿಯ ಪರವಾಗಿ ಫಲ ಪುಷ್ಪ ಶಾಲು ಹೊದಿಸಿ ಸನ್ಮಾನಿಸಲಾಯಿತು
ಕಾರ್ಯಕ್ರಮದಲ್ಲಿ ಕುಮಾರಿ ನಿಧಿ.ಜಿ. ಪ್ರಾರ್ಥನೆ ಮಾಡಿದರು ಜಿಲ್ಲಾ ಡೆಪ್ಯುಟಿ ಕಮಾಡೆಂಟ್ ರಮೇಶ್ ಸ್ವಾಗತಿಸಿದರು ಬೆಳ್ತಂಗಡಿ ಪ್ರಭಾರ ಘಟಕಾಧಿಕಾರಿ ಜಯನಂದ ವಂದಿಸಿದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.