ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಸರಕಾರದ ಆದೇಶದಂತೆ ಬಂಟ್ವಾಳ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಕಂದಾಯ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ 20 ರಂದು ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ.
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರಲಿದ್ದು, ಗ್ರಾಮಸ್ಥರಿಗೆ ಕಂದಾಯ ಹಾಗೂ ಇತರ ಇಲಾಖಾ ಸವಲತ್ತುಗಳ ವಿತರಣೆ ನಡೆಯಲಿದ್ದು, ಸಮಸ್ಯೆಗಳ ಬಗ್ಗೆಯೂ ಗ್ರಾಮಸ್ಥರು ಇಲಾಖಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಬಹುದು. ಈ ಬಗ್ಗೆ ಗ್ರಾಮಸ್ಥರು ತಮ್ಮ ದೂರುಗಳನ್ನು ಫೆ 18ರೊಳಗೆ ಪಂಚಾಯತ್ ದೂರು ಪೆಟ್ಟಿಗೆ ಅಥವಾ ಗ್ರಾಮಕರಣಿಕರಲ್ಲಿ ಖುದ್ದಾಗಿ ಸಲ್ಲಿಸಬಹುದು ಎಂದು ಬಂಟ್ವಾಳ ತಹಶೀಲ್ದಾರರ ಕಛೇರಿ ಪ್ರಕಟಣೆ ತಿಳಿಸಿದೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.