ಚಾಮರಾಜನಗರ (ವಿಶ್ವ ಕನ್ನಡಿಗ ನ್ಯೂಸ್) : ನಗರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತ ರೋಗಿಗಳು ಸೇರಿದಂತೆ ಒಟ್ಟು 24 ರೋಗಿಗಳು ಆಕ್ಸಿಜನ್ ಕೊರತೆ ಮತ್ತು ಇತರ ಸಮಸ್ಯೆಗಳಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಈ ಬಗ್ಗೆ ಮಾತನಾಡಿರುವ ಚಾಮರಾಜನಗರ ಜಿಲ್ಲಾಧಿಕಾರಿ ಎಂ ಆರ್ ರವಿ, ಮೈಸೂರಿನಿಂದ ನಮಗೆ ಸೂಕ್ತ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗಲಿಲ್ಲ, ಇದರಿಂದ ರೋಗಿಗಳು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ರಾತ್ರಿ 16 ಮಂದಿ ರೋಗಿಗಳು ಮೃತಪಟ್ಟಿದ್ದರೆ ಇಂದು ನಸುಕಿನ ಜಾವ 4ಕ್ಕೂ ಹೆಚ್ಚು ಕೋವಿಡ್ ರೋಗಿಗಳು ಆಕ್ಸಿಜನ್ ಇಲ್ಲದೆ ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬರುವ ಹೊತ್ತಿಗೆ ರೋಗಿಗಳ ಪ್ರಾಣಪಕ್ಷಿ ಹಾರಿಹೋಗಿತ್ತು. ತಮ್ಮವರನ್ನು ಕಳೆದುಕೊಂಡ ಮನೆಯವರು, ಸಂಬಂಧಿಕರ ಆಕ್ರಂದರ ಮುಗಿಲು ಮುಟ್ಟಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.