ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) :- ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಮ್ಮ ದೇಶದ ಕೊಡುಗೆ . ಯೋಗಾಭ್ಯಾಸ ಮಾಡುವುದರಿಂದ ದೇಹ ಸ್ರವಿಸುವ ಹಾರ್ಮೋನುಗಳಲ್ಲಿ ಸಮತೋಲನ ಇರುತ್ತದೆ . ಎಲ್ಲ ಜೀವಕೋಶಗಳನ್ನು ಬಲಪಡಿಸುತ್ತದೆ .
ಕೋವಿಡ್ ಸಾಂಕ್ರಾಮಿಕ ಇರುವುದರಿಂದ ಎಲ್ಲೂ ಗುಂಪಾಗಿ ಯೋಗವನ್ನು ಮಾಡದೆ ಮನೆಯಲ್ಲೇ ನಮ್ಮ ಕುಟುಂಬದವರೊಡನೆ ಯೋಗವನ್ನು ಮಾಡೋಣ , ಆರೋಗ್ಯವಾಗಿರೋಣ . ಯೋಗ ಎಂಬುದು ಜೀವನಶೈಲಿ , ಮತ್ತು ಜೀವಿಸುವ ವಿಧಾನವಾಗಬೇಕು . ಇದನ್ನು ಒಂದು ದಿನಕ್ಕೆ ಸೀಮಿತ ಮಾಡಬಾರದು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು.
ನಗರದ ಒಳಾಂಗಣ 7 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮತ್ತು ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕ್ರೀಡಾಂಗಣದಲ್ಲಿ ಆನ್ಲೈನ್ ಮುಖಾಂತರ ಯೋಗಾಸನಗಳನ್ನು ಮಾಡುವ ಮೂಲಕ ಆಚರಿಸುವ ಕಾರ್ಯಕ್ರಮವನ್ನು ಆಯುಷ್ ಇಲಾಖೆ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆಗಳ ವತಿಯಿಂದ ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು .
ಈ ಕಾರ್ಯಕ್ರಮವನ್ನು ಕೋಲಾರ ಲೋಕಸಭಾ ಸದಸ್ಯರಾದ ಎಸ್ ಮುನಿಸ್ವಾಮಿ ರವರು ವರ್ಚುಯಲ್ ( Virtual ) ನಲ್ಲಿ ಚಾಲನೆ ನೀಡಿ ಕೋರೊನ ಮೂರನೇ ಆಲೆ ಬರುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಯೋಗಾಸನಗಳನ್ನು ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ದಕ್ಷತೆಯನ್ನು ಹೆಚ್ಚಿಸಿಕೊಂಡು ಕರೋನಾವನ್ನು ನಿಯಂತ್ರಿಸಬೇಕು .
ಯೋಗಾಸನಗಳನ್ನು ಪ್ರತಿ ದಿವಸ ಮಾಡಬೇಕು ಎಂದರು . ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ || ರಾಘವೇಂದ್ರ ಶೆಟ್ಟಿಗಾರ್ ಅವರು ಮಾತನಾಡಿ “ Be With Yoga Be at home ” ಎಂಬ ಘೋಷವಾಕ್ಯದೊಂದಿಗೆ ಅಂತ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುತ್ತಿರುವುದರಿಂದ ಮನೆಯಲ್ಲಿಯೆ ಯಾಗಾಭ್ಯಾಸ ಮಾಡಿ ಯಶಸ್ವಿಗೊಳಿಸಬೇಕು ಎಂದರು . ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ಯುವ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುನಾಥ ಸೇರಿದಂತೆ ಆಯುಷ್ ಇಲಾಖೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.