ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ) : – ಪೌರ ಕಾರ್ಮಿಕರು ಸ್ವಚ್ಛತೆಗೆ ಹೆಚ್ಚು ಗಮನ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ಸಭೆಯಲ್ಲಿ ಮಾತನಾಡಿ , ಪೌರ ಕಾರ್ಮಿಕರು ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ರೂ .೧೪೨೦ ಕೊಟ್ಟು ವಿಮೆ ಮಾಡಿಸಿದಲ್ಲಿ , ಆಕಸ್ಮಿಕ ಮರಣ ಹೊಂದಿದಲ್ಲಿ , ಮರಣ ಹೊಂದಿದ ಪೌರ ಕಾರ್ಮಿಕನ ಕಟುಂಬಕ್ಕೆ ರೂ .೨೦ ಲಕ್ಷ ಪರಿಹಾರ ನೀಡಲಾಗುವುದು . ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ವಿಮೆ ಮಾಡಿಸಬೇಕು . ಕಾರ್ಯನಿರ್ವಹಿಸುವಾಗ ಕೈಗವಸು ಹಾಗೂ ಮಾಸ್ಕ್ ಧರಿಸಬೇಕು ಎಂದು ಹೇಳಿದರು .
ಪುರಸಭಾಧ್ಯಕ್ಷೆ ಲಲಿತಾ ಶ್ರೀನಿವಾಸ್ , ಸಿಎಒ ರಾಜೇಶ್ವರಿ , ಪರಿಸರ ಅಭಿಯಂತರ ಡಿ.ಶೇಖರರೆಡ್ಡಿ , ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ , ನಾಗೇಶ್ , ರಾಮಲಕ್ಷ್ಮಮ್ಮ , ಸುರೇಶ್ ಸಂತೋಷ್ , ಚೆಂದು , ಶ್ರೀನಿವಾಸ್ ಇದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.