ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ) : – ಕೋವಿಡ್ ಸೋಂಕಿನ ಆತಂಕದಲ್ಲೂ ನ್ಯಾಯ ವಿಲೇವಾರಿ ವಿಳಂಬವಾಗದಂತೆ ವೀಡಿಯೋ ಕಾನ್ಸರನ್ಸ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದು , ಇದರ ಸದುಪಯೋಗ ಪಡೆದುಕೊಳ್ಳುವಂತೆ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್ ಕರೆ ನೀಡಿದರು.
ಶುಕ್ರವಾರ ನಗರದ ಜಿಲ್ಲಾ ಕಾರಗೃಹದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ , ವಕೀಲರ ಸಂಘ , ಕಾರಾಗೃಹ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಚಾರಣಾಧೀನ ಖೈದಿಗಳಿಗಾಗಿ ಹಮ್ಮಿಕೊಂಡಿದ್ದ ಕೊವಿಡ್ ಮಾರ್ಗಸೂಚಿಗಳಡಿ ಪಾಲಿಸಬೇಕಾದ ನಿಯಮಗಳ ಕುರಿತ ಕಾನೂನು ಅರಿವು – ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು .
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಜನಜೀವನ ಅಸ್ಥವ್ಯಸ್ತಗೊಂಡಿದೆ , ಆರ್ಥಿಕತೆಗೂ ಪೆಟ್ಟು ಬಿದ್ದಿದೆ , ನ್ಯಾಯಾಂಗ ವ್ಯವಸ್ಥೆಯ ಕಾರ್ಯಕಲಾಪಗಳಿಗೂ ಅಡ್ಡಿಯಾಗಿದೆ ಎಂದು ತಿಳಿಸಿದರು . ಆದರೂ ವಿಚಾರಣಾಧೀನ ಖೈದಿಗಳಿಗೆ ನ್ಯಾಯ ವಿಲೇವಾರಿ ವಿಳಂಬವಾಗದಂತೆ ನ್ಯಾಯಾಲಯ ಕ್ರಮವಹಿಸಿದೆ , ಅನೇಕ ಪ್ರಕರಣಗಳನ್ನು ವೀಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿದೆ ಮತ್ತು ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದರು .
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಹೆಚ್.ಗಂಗಾಧರ್ ಮಾತನಾಡಿ , ಕೊ ವಿಡ್ ಸೋಂಕು ಇಂದು ಸಮಾಜವನ್ನು ತತ್ತರಿಸುವಂತೆ ಮಾಡಿದೆ , ಇದರ ತಡೆಗೆ ಸರ್ಕಾರ ಸೂಚಿಸಿರುವ ಮಾರ್ಗಸೂಚಿ ನಿಯಮಗಳ ಪಾಲನೆ ಕಡ್ಡಾಯವಾಗಿದೆ ಎಂದು ತಿಳಿಸಿದರು .
ಖೈದಿಗಳು ಕಾರಗೃಹದಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದ ಅವರು ಸೋಂಕಿನ ಲಕ್ಷಣ ಕಂಡು ಬಂದರೆ ಜೈಲು ಸಿಬ್ಬಂದಿಯ ಗಮನಕ್ಕೆ ತಂದು ಚಿಕಿತ್ಸೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು . ಕಾನೂನು ಸೇವಾ ಪ್ರಾಧಿಕಾರ ಉಚಿತ ಕಾನೂನು ನೆರವು ನೀಡುತ್ತಿದೆ , ಮಹಿಳೆಯರು , ವಿಕಲಚೇತನರು , ಆರ್ಥಿಕವಾಗಿ ಹಿಂದುಳಿದ ಎಲ್ಲರಿಗೂ ಈ ಸೌಲಭ್ಯವಿದ್ದು , ವಿಚಾರಣಾಧೀನ ಖೈದಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್ , ಕಾನೂನು ಅರಿವು ನೆರವು ಕಾರ್ಯಕ್ರಮಗಳಿಗೆ ವಕೀಲರ ಸಂಘ ಸಂಪೂರ್ಣ ಸಹಕಾರ ನೀಡಿದೆ . ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕಟಿಬದ್ದವಾಗಿದೆ ಎಂದು ತಿಳಿಸಿದರು . ವಿಚಾರಣಾಧೀಕಣ ಬೈದಿಗಳು ಕಾನೂನಿನ ಅರಿವು ಪಡೆದುಕೊಳ್ಳಿ , ಇದರಿಂದ ಜೀವನದಲ್ಲಿ ತಪ್ಪು ಮಾಡದೇ ಎಚ್ಚರವಹಿಸಬಹುದು , ನಮ್ಮ ಸಂವಿಧಾನ , ಕಾನೂನುಗಳಿಗೆ ಗೌರವ ನೀಡುವ ಹೊಣೆ ಎಲ್ಲರದೂ ಆಗಿದೆ ಎಂದರು .
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹ ಇಲಾಖೆ ಅಧೀಕ್ಷಕರಾದ ಕೆ.ಎನ್.ಮೋಹನ್ ಕುಮಾರ್ , ವಿಚಾರಣಾ ಬಂಧಿಗಳ ಹಕ್ಕುಗಳ ಬಗ್ಗೆ ಮಾತನಾಡಿ , ಬೈದಿಗಳಿಗೂ ಕಾನೂನಿನಲ್ಲಿ ಹಕ್ಕುಗಳಿವೆ , ಅಂತಹ ಹಕ್ಕುಗಳನ್ನು ಪಡೆಯಲು ನೀವು ಪ್ರಾಧಿಕಾರದ ನೆರವು ಪಡೆಯಬಹುದು ಎಂದರು . ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಘುಪತಿಗೌಡ , ಈ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಕನಿಷ್ಠ ದೈನಂದಿನ ಬದುಕಿನಲ್ಲಿ ಅಗತ್ಯವಿರುವ ಕಾನೂನುಗಳ ಅರಿವು ಪಡೆದಿರಬೇಕು , ಕಾನೂನಿನ ಜತೆಗೆ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು .
ಹಿರಿಂರು ವಕೀಲ ಕ.ಆರ್.ಧನರಾಜ್ ಬೈದಿಗಳಿಗೆ ಶಿಕ್ಷೆಯಲ್ಲಿ ವಿನಾಯತಿ ಕುರಿತು ಮಾತನಾಡಿ , ಅಪರಾಧಗಳಿಂದ ಮುಕ್ತ ಜೀವನ ನಡೆಸಿ , ಮಾಡಿದ ತಪ್ಪು ಒಪ್ಪಿಕೊಂಡರೆ ಶಿಕ್ಷೆಯ ಪ್ರಮಾಣವೂ ಕಡಿಮೆಯಾಗುತ್ತದೆ , ಮತ್ತೆ ನೀವು ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಸಹಕಾರಿ ಎಂದರು . ಕಾರ್ಯಕ್ರಮದಲ್ಲಿ ಕಾರಾಗೃಹದಲ್ಲಿನ ವೈದಿಗಳು ಪಾಲ್ಗೊಂಡು ಅರಿವು ಪಡೆದುಕೊಂಡರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.