ದುಬೈನಲ್ಲಿ ಕೂತು ಕೊಲೆಗೆ ಸುಪಾರಿ ನೀಡಿದ ಗಂಡ
ಉಡುಪಿ (ವಿಶ್ವ ಕನ್ನಡಿಗ ನ್ಯೂಸ್ ) ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದೂ ಪತಿಯೇ ಹಂತಕ ಎಂಬುದು ತಿಳಿದು ಬಂದಿದೆ .ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದೂ . ಮೃತ ವಿಶಾಲ ಗಾಣಿಗ ಪತಿ ರಾಮಕೃಷ್ಣ ಗಾಣಿಗ ಸುಫಾರಿ ಕೊಟ್ಟು ಕೃತ್ಯವೆಸಗಿರೋದು ತನಿಖೆಯಿಂದ ಬಯಲಾಗಿದೆ. ಈ ಸಂಬಂಧ ವಿಶಾಲ ಗಾಣಿಗ ಪತಿ ಹಾಗೂ ಸುಫಾರಿ ಕಿಲ್ಲರ್ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ .ಜುಲೈ 12ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ವಿಶಾಲ ಗಾಣಿಗ ಹತ್ಯೆ ನಡೆದಿತ್ತು. ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ನೇಣಿಗೆ ಹಾಕಲಾಗಿದ್ದು. ಈ ಪ್ರಕರಣ ಕರಾವಳಿಯನ್ನೇ ಬೆಚ್ಚಿಬೀಳಿಸಿತ್ತು. ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಉಡುಪಿ ಎಸ್ಪಿ ವಿಷ್ಣುವರ್ಧನ್ ಆರೋಪಿಗಳ ಪತ್ತೆಗೆ 5 ತಂಡಗಳನ್ನು ರಚಿಸಿದ್ದರು.ಪ್ರಕರಣ ಸಂಬಂಧ ತಾಂತ್ರಿಕ ಮಾಹಿತಿ ಪರಿಶೀಲಿಸುವಾಗುಗ ಸಿಕ್ಕ ಸುಳಿವು ಪ್ರಕರಣದ ದಿಕ್ಕನ್ನೇ ಬದಲಾಯಿಸಿತು. ಆರೋಪಿ ಉತ್ತರ ಪ್ರದೇಶದ ಗೋರಖ್ಪುರ್ ಜಿಲ್ಲೆಯಲ್ಲಿರುವುದು ತಿಳಿಯಿತು. ಕೂಡಲೇ ಮಹಾರಾಷ್ಟ್ರದಲ್ಲಿದ್ದ ತಂಡವನ್ನು ಗೋರಖ್ಪುರಕ್ಕೆ ಕಳಿಸಿ ಅಲ್ಲಿನ ಎಸ್ಪಿ ದಿನೇಶ್ ಕುಮಾರ್ ನೆರವು ಪಡೆದು ಮೂರು ದಿನ ಶೋಧ ನಡೆಸಿ ನೇಪಾಳದ ಗಡಿಯಲ್ಲಿ ಸ್ವಾಮಿನಾಥನ್ನನ್ನು ಬಂಧಿಸಲಾಯಿತು.ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಪತಿ ರಾಮಕೃಷ್ಣ ಗಾಣಿಗ ಸುಪಾರಿ ಕೊಟ್ಟು ವಿಶಾಲರನ್ನು ಕೊಲೆ ಮಾಡಿಸಿರುವ ವಿಚಾರ ಬೆಳಕಿಗೆ ಬಂತು. ಬೈಂದೂರಿನ ಉಪ್ಪುಂದದಲ್ಲಿದ್ದ ರಾಮಕೃಷ್ಣ ಗಾಣಿಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ ಇನ್ನಷ್ಟೇ ಇದೆಲ್ಲಾ ಹೊರಬೀಳಬೇಕಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.