ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ 224 ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಆದರೆ ನಾನು ಯಾರಿಗೂ ಪಕ್ಷಕ್ಕೆ ಆಹ್ವಾನ ನೀಡಿಲ್ಲ. ಜಿಟಿ ದೇವೇಗೌಡ ಮಾತ್ರ ಸಂಪರ್ಕ ಮಾಡಿ ಮಾತುಕತೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು ಸ್ವರ್ಗ ಮಾಡುವ ಭ್ರಮೆ ಹುಟ್ಟಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತು ಮೋದಿ ಸರ್ಕಾರ ರೈತರಿಗೆ, ಯುವಕರಿಗೆ ಮಂಕು ಬೂದಿ ಎರಚಿ, ದಾರಿ ತಪ್ಪಿಸಿದೆ. ಪ್ರಧಾನಿ ಮೋದಿ ಪ್ರಧಾನಿಯಾಗಿ 7 ವರ್ಷ ಕಳೆದಿದ್ದರು. ಜನರಿಗೆ ಅಚ್ಚೇ ದಿನ್ ಬರಲಿಲ್ಲ, ಬದಲಾಗಿ ಬೆಲೆ ಏರಿಕೆಯಿಂದ ಜನಸಾಮಾನ್ಯರ ಪಾಲಿಗೆ ಬಹಳ ಕೆಟ್ಟ ದಿನಗಳು ಬಂದಿವೆ. ಆದರೆ ದೇಶದ ಕೆಲವೇ ಕೆಲವು ಉದ್ದಿಮೆದಾರರಿಗೆ ಅಚ್ಚೇದಿನ್ ಬಂದಿದೆ ಎಂದು ಅವರು ತೀವ್ರವಾಗ್ದಾಳಿ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.