ಮಂಜನಾಡಿ (www.vknewes.com) : ಕರ್ನಾಟಕ ಮುಸ್ಲಿಂ ಜಮಾಅತ್ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಉಳ್ಳಾಲ ವ್ಯಾಪ್ತಿಯ ಮುಸ್ಲಿಂ ಸಮುದಾಯದ ಸರಕಾರಿ ನೌಕರರಿಗೆ ಹಾಗೂ ಮುಸ್ಲಿಂ ನಿವೃತ್ತ ಸರಕಾರಿ ನೌಕರರಿಗೆ ಸನ್ಮಾನ ಕಾರ್ಯಕ್ರಮ ಮಂಜನಾಡಿ ಅಲ್ ಮದೀನಾದ ಶರಫುಲ್ ಉಲಮಾ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಮಂಜನಾಡಿ ಅಲ್ ಮದೀನಾ ವಿದ್ಯಾಸಂಸ್ಥೆಯ ನಿದೇರ್ಶಕ ಮುಹಮ್ಮದ್ ಕುಂಞ ಅಂಜದಿ ದುಆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಸರಕಾರಿ ಶಿಕ್ಷಣ ಸಂಸ್ಥೆ, ಪೊಲೀಸ್ ಇಲಾಖೆ, ಮೆಸ್ಕಾಂ, ಅಂಚೆ ಕಚೇರಿ, ಕೃಷಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆಯಿಂದ ನಿವೃತ್ತಿ ಹೊಂದಿದವರನ್ನು ಸನ್ಮಾನಿಸಲಾಯಿತು.
ಸಿಬ್ಬಂದಿಯನ್ನು ಸನ್ಮಾನಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಯು.ಟಿ ಖಾದರ್ , ದೇಶದಲ್ಲಿ ಜಾತ್ಯಾತೀತ ಸಿದ್ಧಾಂತದ ಆಡಳಿತ ಬಂದಲ್ಲಿ ಮಾತ್ರ ಜನತೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ. ಧರ್ಮಗಳ ನಡುವೆ ಪರಸ್ಪರ ನಡೆಸುವ ವಿಭಜನೆಯಿಂದ ಏನನ್ನೂ ಸಾಧಿಸಲು ಅಸಾಧ್ಯ. ಮುಸ್ಲಿಂ ಸಮುದಾಯದಲ್ಲಿ ಅತೀ ದೊಡ್ಡ ಮಟ್ಟಿನ ಕಾಂತ್ರಿಯಾಗಬೇಕಾದರೆ ಉಲಮಾ ಉಮರಾಗಳ ನೇತೃತ್ವ ಪ್ರಮುಖವಾಗಿರುತ್ತದೆ. ಮುಸ್ಲಿಂ ಸರಕಾರಿ ಸಿಬ್ಬಂದಿ ತಮ್ಮ ಇಲಾಖೆಗಳಲ್ಲಿ ಪ್ರಾಮಾಣಿಕೆ ಸೇವೆ ಗೈಯ್ಯುವ ಮೂಲಕ ಸರ್ವರ ಪ್ರೀತಿಗೆ ಪಾತ್ರರಾಗಬೇಕು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಎ.ಎಂ ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮುಸ್ಲಿಂ ಸರಕಾರಿ ನೌಕರರು ಪ್ರವಾದಿಯ ವ್ಯಕ್ತಿತ್ವವನ್ನು ಆದರ್ಶವಾಗಿಟ್ಟುಕೊಂಡು ಇತರರಿಗೆ ಮಾದರಿಯಾಗಬೇಕು. ಸಮುದಾಯದ ಇತರರು ಸರಕಾರಿ ಹುದ್ದೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ಮಾಗದರ್ಶನದ ಜೊತೆಗೆ ಪ್ರೋತ್ಸಾಹ ನೀಡಬೇಕು. ಕರ್ನಾಟಕ ಮುಸ್ಲಿಂ ಜಾಮಾಅತ್ ಉತ್ತಮ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ವಿಚಾರಗೋಷ್ಠಿಗಳನ್ನು ಆಯೋಜನೆ ಮಾಡುವ ಮೂಲಕ ಮುಸ್ಲಿಂ ಸಮುದಾಯವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಪ್ರಯತ್ನಿಸಬೇಕಿದೆ ಎಂದರು.
ಕರ್ನಾಟಕ ಮುಸ್ಲಿಂ ಜಮಾಅತ್ ಉಳ್ಳಾಲ ವಲಯಾಧ್ಯಕ್ಷ ಅಲಿ ಕುಂಞ ಪಾರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಕೆ.ಸಿ.ಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷ ಶೇಖ್ ಬಾವ ಹಾಜಿ,ಎಸ್ ವೈಎಸ್ ರಾಜ್ಯಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಎಸ್ಸೆಸ್ಸೆಫ್ ರಾಜ್ಯ ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮುಖ್ಯ ಅತಿಥಿಗಳಾಗಿದರು. ಸದಸ್ಯ ಕೆ.ಎಚ್. ಇಸ್ಮಾಯಿಲ್ ಸ ಅದಿ ಕಿನ್ಯ, ಕಾರ್ಯದರ್ಶಿ ಸಾಮಣಿಗೆ ಮದನಿ, ಅಬ್ದುಲ್ ರಹ್ಮಾನ್ ಚಂದಹಿತ್ಲು ಉಪಸ್ಥಿತರಿದ್ದರು. ಕಾರ್ಯದರ್ಶಿ ಕೆ.ಎಂ.ಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರ.ಕಾರ್ಯದರ್ಶಿ ಜಲೀಲ್ ಮೋಂಟುಗೋಳಿ ಸ್ವಾಗತಿಸಿದರು. ಉಪಾಧ್ಯಕ್ಷ ಎನ್.ಎಸ್ ಕರೀಂ ವಂದಿಸಿದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.