ಬೆಂಗಳೂರು (www.vknewes.com) : ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ರಾಜಕೀಯ ಪ್ರೇರಿತ, ಪ್ರಾಯೋಜಿತ ಎಂದು ಮಾತನಾಡಿರುವ ಖೇದ ಕರ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೂಡಲೇ ರೈತರಲ್ಲಿ ಕ್ಷಮೆ ಕೇಳಬೇಕು ಯಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಒತ್ತಾಯಿಸಿದ್ದಾರೆ.
ಅವೈಜ್ಞಾನಿಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು. ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಹಲವು ದಿನಗಳಿಂದ ಕೃಷಿಕರು ನಡೆಸುತ್ತಿರುವ ಧರಣಿಯ ಬಗ್ಗೆ ಮುಖ್ಯಮಂತ್ರಿಗಳು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಮುತ್ಸದ್ದಿ ರಾಜಕಾರಣಿ ಎಂದೇ ಹೆಸರಾಗಿರುವ ಬೊಮ್ಮಾಯಿಯವರು ರೈತ ಚಳವಳಿಯನ್ನು ಹಿಯಾಳಿಸುವುದು ಸರಿಯಲ್ಲ. ಕೂಡಲೇ ಮುಖ್ಯಮಂತ್ರಿಗಳು ರೈತರಲ್ಲಿ ಕ್ಷಮೆ ಕೇಳಿ ಅವರ ನ್ಯಾಯೋಚಿತ ಬೇಡಿಕೆಗಳ ಈಡೇರಿಕೆಗೆ ಕೇಂದ್ರದ ಮೇಲೆ ಒತ್ತಡ ಹೇರಬೇಕು.
ಒಂದು ವೇಳೆ ದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಪ್ರಾಯೋಜಿತ ಎನ್ನುವುದಾದರೆ, ಮುಖ್ಯಮಂತ್ರಿ ಬೊಮ್ಮಾಯಿಯವರು ಯಾರು ಈ ಚಳುವಳಿಗೆ ಪ್ರಾಯೋಜಕತ್ವ ಮಾಡುತ್ತಿದ್ದಾರೆ ಎನ್ನುವುದನ್ನು ಈಗಲೇ ಬಹಿರಂಗಪಡಿಸಬೇಕು. ಈ ರಿತಿ ಅನ್ನದಾತನನ್ನು ಅವಮಾನಿಸುವುದು ಅನ್ನು ಬಿಟ್ಟು ಮುಖ್ಯಮಂತ್ರಿಗಳು ಗಂಭೀರತೆಯಿಂದ ರೈತರ ಸಮಸ್ಯೆಗಳನ್ನು ನಿವಾರಿಸಲು ಮುಂದಾಗಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸುತ್ತದೆ.
ರಾಜ್ಯದಲ್ಲಿ ರೈತರ ಹಲವಾರು ಸಮಸ್ಯೆಗಳಿದ್ದು ಅದನ್ನು ಬಗೆಹರಿಸುವ ಬಗ್ಗೆ ಕಾಳಜಿವಹಿಸಬೇಕು, ಮಳೆ ಮತ್ತು ಪ್ರವಾಹದಿಂದ ಬೆಳೆನಷ್ಟ ಮತ್ತು ಭೂಮಿ ಕಳೆದುಕೊಂಡ ಬಹಳಷ್ಟು ರೈತರಿಗೆ ಇನ್ನು ವರೆಗೂ ಪರಿಹಾರಧನ ಸಿಕ್ಕಿಲ್ಲ, ಮುಖ್ಯಮಂತ್ರಿಗಳು ಅದರ ಕಡೆ ಗಮನ ಹರಿಸಬೇಕೆಂದು ವೇಲ್ಫೇರ್ ಪಾರ್ಟಿ ಒತ್ತಾಯಿಸಿದೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.