ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರುವುತ್ತಿರುವುದರಿಂದ ಸದ್ಯಕ್ಕೆ ಪಿಯುಸಿ, ಪದವಿ ಹಾಗೂ ಸ್ನಾತಕ್ಕೋತ್ತರ ಕಾಲೇಜುಗಳನ್ನು ಮುಚ್ಚಿ ಆನ್ಲೈನ್ ತರಗತಿಯನ್ನು ನಡೆಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಹಿಜಾಬ್ ಕುರಿತಾಗಿ ಸಂಘಪರಿವಾರ ಹುಟ್ಟುಹಾಕಿದ ವಿವಾದ ಇದೀಗ ಎಲ್ಲ ಜಿಲ್ಲೆಗಳಿಗೆ ಹಬ್ಬುತ್ತಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮ, ಜಾತಿ ಸುಳಿಯಬಾರದು. ಇದು ತೀವ್ರಗೊಂಡರೆ ಕಾನೂನು ಸುವ್ಯವಸ್ಥೆ ವಿಚಾರವಾಗಿದೆ ಎಂದಿದ್ದಾರೆ. ಈ ಕಾರಣಕ್ಕಾಗಿ ಸರ್ಕಾರ ಕೂಡಲೇ ಪದವಿ ಪೂರ್ವ, ಪದವಿ ಹಾಗೂ ಸ್ನಾತಕ್ಕೋತ್ತರ ಕಾಲೇಜುಗಳನ್ನು ಕೂಡಲೇ ನಿಲ್ಲಿಸಿ ಆನ್ಲೈನ್ ತರಗತಿ ಆರಂಭಿಸಿ ಎಂದು ಮನವಿ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.