ಮೈಸೂರು (ವಿಶ್ವ ಕನ್ನಡಿಗ ನ್ಯೂಸ್) : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಾಸಕ ರಘುಪತಿ ಭಟ್ಗೆ ಬೆದರಿಕೆ ಕರೆಗಳು ಬರುತ್ತಿದೆ ಎನ್ನುವ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ ಯು.ಟಿ.ಖಾದರ್ ರಘುಪತಿ ಭಟ್ ಅವರಿಗೆ ರಕ್ಷಣೆ ಕೊಡಬೇಕು ಎಂದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಯಾರು ಯಾರಿಗೂ ಬೆದರಿಕೆ ಹಾಕಬಾರದು. ಅದರಂತೆ ಜನಪ್ರತಿನಿಧಿಗಳು ಕೂಡ ಸಮಸ್ಯೆಗಳನ್ನ ಪರಿಹರಿಸಬೇಕು. ಇನ್ನು ಹಿಜಾಬ್ ವಿವಾದದ ವಿಚಾರವನ್ನು ಸದನದಲ್ಲಿ ಚರ್ಚೆ ಮಾಡುತ್ತೇವೆ. ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.