ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಮಾಜಿ ಶಾಸಕ, ಕರಾವಳಿಯ ರಾಜಕೀಯ ಭೀಷ್ಮ ಎಂದೇ ಜನ ಜನಿತ ರಾಗಿದ್ದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎಜಿ ಕೊಡ್ಗಿ) (93) ಸೋಮವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಕಳೆದ ಕೆಲವು ದಿನಗಳ ಹಿಂದೆ ಡೆಂಗ್ಯೂ ಜ್ವರ ದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸಿದ ಅವರು ಸೋಮವಾರ ಕೊನೆಯುಸಿರು ಎಳೆದರು . ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಎಜಿ ಕೊಡ್ಗಿ, ರಾಷ್ಟ್ರೀಯ ಮಟ್ಟದವರೆಗೂ ಸಂಪರ್ಕವನ್ನು ಹೊಂದಿದ್ದರು. 1972-83ರ ತನಕ ಬೈಂದೂರು ಶಾಸಕರಾಗಿ 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷರಾದ ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಕಾಂಗ್ರೆಸ್ನಲ್ಲಿದ್ದಾಗ ತಮ್ಮ ನಿಲುವುಗಳಿಗೆ ಧಕ್ಕೆಯುಂಟಾದಾಗ 1993ರಲ್ಲಿ ಬಿಜೆಪಿಗೆ ಬಂದ ಕೊಡ್ಗಿ ಬಿಜೆಪಿ ಕುಂದಾಪುರ ತಾಲೂಕು ಅಧ್ಯಕ್ಷ, ಜಿಲ್ಲಾಧ್ಯಕ್ಷ, ರಾಜ್ಯ ಬಿಜೆಪಿ ಉಪಾಧ್ಯಕ್ಷ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.ಮೃತರು ಪತ್ನಿ ಸುನಂದಾ, ಓರ್ವ ಪುತ್ರಿ, ಸೇರಿದಂತೆ ಐದು ಮಂದಿ ಪುತ್ರರನ್ನು ಅಗಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.