ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಬಿಸಿಯೂಟ ಮಾಡುತ್ತಿದ್ದ ಸಂದರ್ಭ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದು, ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.
ಮೇ.30ರಂದು ಮಧ್ಯಾಹ್ನ ಶಾಲೆಯಲ್ಲಿ ಸಾಂಬಾರು ಮಾಡುತ್ತಿದ್ದ ಸಂದರ್ಭ ಅವರು ಕಾಲು ಜಾರಿ ಪಾತ್ರೆಗೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.