ದುಬೈ (www.vknews.in) : ಎಸ್ ಕೆ ಎಸ್ ಎಸ್ ಎಫ್ ಕರ್ನಾಟಕ ಯುಎಇ ಸಮಿತಿ ಅಧ್ಯಕ್ಷರಾದ ಸಯ್ಯದ್ ಅಸ್ಕರ್ ಅಲಿ ತಂಙಳ್ ಅವರ ಕಿರಿಯ ಸಹೋದರ ಸಯ್ಯದ್ ಬಾಫಖಿ ತಂಙಳ್ ಕೋಲ್ಪೆ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೂನ್ 26ರಂದು ಮುಂಜಾನೆ ಇಹಲೋಕ ತ್ಯಜಿಸಿದರು ಅವರಿಗೆ 41 ವಯಸ್ಸಾಗಿತ್ತು, ಅವರು ಎರಡು ಮಕ್ಕಳು, ಪತ್ನಿ ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಸಯ್ಯದ್ ಬಾಫಖಿ ತಂಙಳ್ ಕೋಲ್ಪೆ ಅವರ ವಿಯೋಗಕ್ಕೆ ಎಸ್ ಕೆ ಎಸ್ ಎಸ್ ಎಫ್ ಕರ್ನಾಟಕ ಯುಎಇ ಸಮಿತಿ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಮೌಲವಿ ಕಲ್ಲೆಗ ಮತ್ತು ಅಧೀನ ಸಮಿತಿಗಳ ಪ್ರಮುಖರು ಅಗಾಧ ದುಃಖವನ್ನು ವ್ಯಕ್ತಪಡಿಸಿ ಸಂತಾಪವನ್ನು ಸೂಚಿಸುವುದರೊಂದಿಗೆ ಮೃತರ ಮೇಲೆ ಎಲ್ಲಾ ದೀನಿ ಸಹೃದಯರು ಮಯ್ಯಿತ್ ನಮಾಝ್ ಮತ್ತು ವಿಶೇಷ ದುಆ ಕಾರ್ಯವನ್ನು ನೆರವೇರಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.