ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕ್ಯಾನ್ಸರ್ ಇದೆ ಎಂದು ತಿಳಿದು ಮಹೇಶ್ (44), ಪತ್ನಿ ಜ್ಯೋತಿ ಮತ್ತು ಮಗ ನಂದೀಶ್ ಗೌಡ (9) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹೊಟ್ಟೆ ನೋವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚೆಕ್ ಮಾಡಿಸಿದ ವೇಳೆ ಕ್ಯಾನ್ಸರ್ ಇದೆ ಎಂದು ಡಾಕ್ಟರ್ ತಿಳಿಸಿದ್ದಾರೆ.
ವಿಷಯ ತಿಳಿದ ಬಳಿಕ ಮಹೇಶ್ ತಾನು ಕ್ಯಾನ್ಸರ್ನಿಂದ ಸಾವನ್ನಪ್ಪಿದ್ರೆ ಕುಟುಂಬ ಅನಾಥವಾಗುತ್ತದೆ. ಪತ್ನಿ, ಮಗು ಬೀದಿಗೆ ಪಾಲಾಗುತ್ತಾರೆ ಎಂದು ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ. ಮನೆಯ ಒಂದು ರೂಂನಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಮಹೇಶ್ ಆತ್ಮಹತ್ಯೆಗೆ ಶರಣಾದರೆ, ಮತ್ತೊಂದು ರೂಂನ ಬೆಡ್ ಮೇಲೆ ಪತ್ನಿ ಹಾಗೂ ನಂದೀಶ್ ಶವವಾಗಿ ಪತ್ತೆ ಆಗಿದ್ದಾರೆ. ಘಟನೆಯಲ್ಲಿ ಪತ್ನಿ ಹಾಗೂ ಮಗು ವಿಷ ಸೇವಿಸಿ ಸಾವನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.
ಆತ್ಮಹತ್ಯೆ ಮಾಡುವ ಬಗ್ಗೆ ಮಹೇಶ್ ಅರ್ಧ ಪುಟದ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಆರೋಗ್ಯ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.