ಕೇರಳ (ವಿಶ್ವ ಕನ್ನಡಿಗ ನ್ಯೂಸ್) : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೋಶಾಧಿಕಾರಿಯೂ , ಪ್ರಮುಖ ಪಂಡಿತರೂ, ಕರ್ಮ ಶಾಸ್ತ್ರದಲ್ಲಿ ಹಾಗೂ ವ್ಯಾಕರಣ ಶಾಸ್ತ್ರದಲ್ಲಿ ಜ್ಞಾನದ ಸಾಗರವಾಗಿದ್ದ ಸೂಫಿವರ್ಯರೂ ಆದ ಶೈಖುನಾ ಚೇಲಕ್ಕಾಡ್ ಮುಹಮ್ಮದ್ ಮುಸ್ಲಿಯಾರ್ (91) ವಫತಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದಾಗಿ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ನಿಧನರಾದರು. ಇಂದು ಸಂಜೆ 4 ಗಂಟೆಗೆ ಚೇಲಕ್ಕಾಡ್ ಜುಮಾ ಮಸೀದಿಯಲ್ಲಿ ಮಯ್ಯಿತ್ ನಮಾಜ್ ನಡೆಯಲಿದೆ. 2004ರಿಂದ ಸಮಸ್ಥ ಕೇರಳ ಜಮಿಯ್ಯತುಲ್ ಉಲಮಾದ ಕೇಂದ್ರ ಮುಶಾವರದ ಸದಸ್ಯರಾಗಿರುವ ಅವರು ಸಮಸ್ತ ಕೋಝಿಕ್ಕೋಡ್ ಜಿಲ್ಲಾ ಅಧ್ಯಕ್ಷರೂ ಆಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.