ಮಂಗಳೂರು (www.vknews.in) : ಮಾಜಿ ಸಚಿವ, ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ 3ದಿನಗಳ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ ಆರ್ ಟಿಪಿಸಿಆರ್ ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ ಖಾದರ್ ಅವರನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಿದ್ದು, ರೋಗದ ಯಾವುದೇ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
ಆದ್ದರಿಂದ 3ದಿನಗಳಲ್ಲಿ ಯಾರನ್ನು ಭೇಟಿಯಾಗಲು ಸಾಧ್ಯವಾಗುವುದಿಲ್ಲ, ಅಲ್ಲದೆ ಈ 3 ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಿದ್ದಾರೆ. ಶಾಸಕರು 3ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಲಭ್ಯವಾಗಿದ್ದು, ಅಗತ್ಯಬಿದ್ದಲ್ಲಿ ದೂರವಾಣಿ ಸಂಖ್ಯೆನ್ನು ಸಂಪರ್ಕಿಸಬಹುದು . ಆದಷ್ಟು ಶೀಘ್ರವೇ ಗುಣಮುಖರಾಗಿ ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.