ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಅವರು ಕಾಂಗ್ರೆಸ್ ಅನ್ನು ಲೇವಡಿ ಮಾಡಿದ್ದಾರೆ. ಗೋವಾದಲ್ಲಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡ ನಂತರ, ಟ್ವಿಟರ್ ಮೂಲಕ ಚಡ್ಡಾ ಪ್ರತಿಕ್ರಿಯೆ ನೀಡಿದ್ದಾರೆ.
‘ಆಪರೇಷನ್ ಕಮಲಾ ದೆಹಲಿ ಮತ್ತು ಪಂಜಾಬ್ನಲ್ಲಿ ವಿಫಲವಾದರೂ ಗೋವಾದಲ್ಲಿ ಯಶಸ್ವಿಯಾಯಿತು! ಏನು ಕಾರಣ? ಏಕೆಂದರೆ ನೀವು ಕಾಂಗ್ರೆಸ್ಗೆ ಮತ ಹಾಕಿದಾಗ ನೀವು ಭವಿಷ್ಯದ ಬಿಜೆಪಿ ಶಾಸಕರನ್ನು ಆಯ್ಕೆ ಮಾಡುತ್ತಿದ್ದೀರಿ. ಕಾಂಗ್ರೆಸ್ ಮುಗಿದಿದೆ, RIP’; ಎಂದು ಚಡ್ಡಾ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಾಮತ್ ಅವರಲ್ಲದೆ, ವಿರೋಧ ಪಕ್ಷದ ನಾಯಕರಾದ ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಪಕ್ಷವನ್ನು ತೊರೆದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.