ಹರಿದ್ವಾರ (ವಿಶ್ವ ಕನ್ನಡಿಗ ನ್ಯೂಸ್) : ಉತ್ತರಾಖಂಡದ ರೆಸಾರ್ಟ್ ಒಂದರಲ್ಲಿ ರಿಸೆಪ್ಷನಿಸ್ಟ್ ಆಗಿದ್ದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನೋದ್ ಆರ್ಯ ಮತ್ತು ಅವರ ಪುತ್ರ ಅಂಕಿತ್ ಆರ್ಯ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಈ ಪ್ರಕರಣದಲ್ಲಿ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಅವರನ್ನು ಬಂಧಿಸಲಾಗಿದೆ.
ಮೃತಳನ್ನು ರಿಷಿಕೇಶದ ವನತಾರಾ ರೆಸಾರ್ಟ್ ನಲ್ಲಿ ರಿಸೆಪ್ಷನಿಸ್ಟ್ ಆಗಿರುವ ಅಂಕಿತಾ (19) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರನಲ್ಲದೆ, ರೆಸಾರ್ಟ್ ಉದ್ಯೋಗಿಗಳಾದ ಸರಬ್ ಮತ್ತು ಅಂಕಿತ್ ಅವರನ್ನು ಸಹ ಬಂಧಿಸಲಾಗಿದೆ.
ಪೌರಿ ಜಿಲ್ಲೆಯ ಯಮಕೇಶ್ವರದ ಪುಲ್ಕಿತ್ ಒಡೆತನದ ರೆಸಾರ್ಟ್ನಲ್ಲಿ ಸ್ವಾಗತಕಾರರಾದ ಅಂಕಿತಾ ಅವರ ಶವವು ಮೊನ್ನೆ ಕಾಲುವೆಯಲ್ಲಿ ಪತ್ತೆಯಾಗಿತ್ತು. ರೆಸಾರ್ಟ್ ಗೆ ಬಂದ ಜನರೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದು ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಬಾಲಕಿಯ ತಂದೆ ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರಾಗಿದ್ದಾರೆ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.